BREAKING NEWS

ವಿರೋಧ ಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿ ಬಿಜೆಪಿಯಲ್ಲಿಲ್ಲವೇ : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು : ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ ತೆರೆದರೆ ಹೊಲಸು ಮಾತುಗಳು, ಆರ್.ಅಶೋಕ್‍ಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ.ಸಿ.ಎನ್.ಅಶ್ವಥ್‍ನಾರಾಯಣರಿಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ. ಪ್ರತಾಪ್ ಸಿಂಹನನ್ನೇ ಎದುರಿಸಲಾಗದ ಬಸವರಾಜ ಬೊಮ್ಮಾಯಿ ಇನ್ನೂ ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ ಬಿ.ಎಸ್.ಯಡಿಯೂರಪ್ಪ ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಭಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಬಿಜೆಪಿ ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ ಎಂದು ಕಾಂಗ್ರೆಸ್ ಅಣಕವಾಡಿದೆ.

ಬಿಜೆಪಿಯ ಒಂದು ಬಣ ಹೊಂದಾಣಿಕೆ ರಾಜಕೀಯದಿಂದ ನಮಗೆ ಸೋಲಾಯಿತು ಎನ್ನುತ್ತಿದೆ. ಮತ್ತೊಂದು ಬಣ ಕಾಂಗ್ರೆಸ್ ಗ್ಯಾರಂಟಿಗಳಿಂದ ನಮಗೆ ಸೋಲಾಯ್ತು ಎನ್ನುತ್ತಿದೆ. ಎರಡೂ ಬಣದವರು ಸತ್ಯ ಹೇಳಲು, ಒಪ್ಪಿಕೊಳ್ಳಲು ತಯಾರಿಲ್ಲ. ಶೇ.40ರಷ್ಟು ಕಮಿಷನ್ ಭ್ರಷ್ಟಾಚಾರದಿಂದ, ದುರಾಡಳಿತದಿಂದ, ಜನಪರ ಚಿಂತನೆಗಳು ಇಲ್ಲದಿರುವುದರಿಂದ, ಹಗರಣಗಳಿಂದ ಸೋಲಾಗಿದ್ದನ್ನು ಒಪ್ಪಿಕೊಳ್ಳದಿದ್ದರೆ ಬಿಜೆಪಿಯದ್ದು ಆತ್ಮಾವಲೋಕನ ಆಗುವುದಿಲ್ಲ, ಆತ್ಮ ವಂಚಕತನೆ ಆಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago