ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಶುರು ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಟಿಶ್ಯು ಪೇಪರ್ ಎಂದುಕೊಂಡಿದೆಯೇ ಎಂದು ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ, ಪದಚ್ಯುತಿಗೊಳಿಸಿದ ಬಳಿಕ ವಯಸ್ಸಿನ ಕಾರಣವನ್ನು ಬಿಜೆಪಿ ನೀಡಿತ್ತು. ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರೀಡಂ ಪಾರ್ಕ್ನಲ್ಲಿ ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು. ಅಧಿಕಾರ ನಡೆಸಲು ಮಾತ್ರ ಬಿ.ಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿತ್ತೇ. ಈಗ ಅವರಿಗೆ ಹದಿನೆಂಟರ ಹರೆಯವೇ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ.
ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಟಿಶ್ಯು ಪೇಪರ್ ಎಂದುಕೊಂಡಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಅದಲ್ಲದೇ ಒಬ್ಬ ವಿರೋಧ ಪಕ್ಷದ ನಾಯಕನನ್ನು ಬಿಜೆಪಿಗೆ ಆಯ್ಕೆ ಮಾಡಲು ಆಗಿಲ್ಲ. ತಾನೇ ರಾಜಕೀಯದಿಂದ ದೂರ ತಳ್ಳಿದ್ದ ಬಿಎಸ್ ಯಡಿಯೂರಪ್ಪ ಅವರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ. ಅಗತ್ಯವಿದ್ದಾಗ ಕಾಲು ಹಿಡಿಯುವುದು, ಅಗತ್ಯವಿಲ್ಲದಾಗ ಕಾಲು ಎಳೆಯುವುದು ಬಿಜೆಪಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದೆ.
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…