ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಶುರು ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಟಿಶ್ಯು ಪೇಪರ್ ಎಂದುಕೊಂಡಿದೆಯೇ ಎಂದು ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ, ಪದಚ್ಯುತಿಗೊಳಿಸಿದ ಬಳಿಕ ವಯಸ್ಸಿನ ಕಾರಣವನ್ನು ಬಿಜೆಪಿ ನೀಡಿತ್ತು. ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರೀಡಂ ಪಾರ್ಕ್ನಲ್ಲಿ ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು. ಅಧಿಕಾರ ನಡೆಸಲು ಮಾತ್ರ ಬಿ.ಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿತ್ತೇ. ಈಗ ಅವರಿಗೆ ಹದಿನೆಂಟರ ಹರೆಯವೇ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ.
ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಟಿಶ್ಯು ಪೇಪರ್ ಎಂದುಕೊಂಡಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಅದಲ್ಲದೇ ಒಬ್ಬ ವಿರೋಧ ಪಕ್ಷದ ನಾಯಕನನ್ನು ಬಿಜೆಪಿಗೆ ಆಯ್ಕೆ ಮಾಡಲು ಆಗಿಲ್ಲ. ತಾನೇ ರಾಜಕೀಯದಿಂದ ದೂರ ತಳ್ಳಿದ್ದ ಬಿಎಸ್ ಯಡಿಯೂರಪ್ಪ ಅವರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ. ಅಗತ್ಯವಿದ್ದಾಗ ಕಾಲು ಹಿಡಿಯುವುದು, ಅಗತ್ಯವಿಲ್ಲದಾಗ ಕಾಲು ಎಳೆಯುವುದು ಬಿಜೆಪಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದೆ.
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…