BREAKING NEWS

ಅಧಿಕಾರ ನಡೆಸಲು ಮಾತ್ರ ಯಡಿಯೂರಪ್ಪಗೆ ವಯಸ್ಸಾಗಿತ್ತೇ: ಕಾಂಗ್ರೆಸ್‌ ಕಿಡಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಶುರು ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ವಯಸ್ಸಿನ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಬಿ.ಎಸ್‌ ಯಡಿಯೂರಪ್ಪ ಅವರನ್ನು ಬಿಜೆಪಿ ಟಿಶ್ಯು ಪೇಪರ್‌ ಎಂದುಕೊಂಡಿದೆಯೇ ಎಂದು ಪ್ರಶ್ನಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಎಸ್‌ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ, ಪದಚ್ಯುತಿಗೊಳಿಸಿದ ಬಳಿಕ ವಯಸ್ಸಿನ ಕಾರಣವನ್ನು ಬಿಜೆಪಿ ನೀಡಿತ್ತು. ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರೀಡಂ ಪಾರ್ಕ್‌ನಲ್ಲಿ ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು. ಅಧಿಕಾರ ನಡೆಸಲು ಮಾತ್ರ ಬಿ.ಎಸ್‌ ಯಡಿಯೂರಪ್ಪ ಅವರಿಗೆ ವಯಸ್ಸಾಗಿತ್ತೇ. ಈಗ ಅವರಿಗೆ ಹದಿನೆಂಟರ ಹರೆಯವೇ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ.

ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಬಿಎಸ್‌ ಯಡಿಯೂರಪ್ಪ ಅವರನ್ನು ಬಿಜೆಪಿ ಟಿಶ್ಯು ಪೇಪರ್ ಎಂದುಕೊಂಡಿದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಅದಲ್ಲದೇ ಒಬ್ಬ ವಿರೋಧ ಪಕ್ಷದ ನಾಯಕನನ್ನು ಬಿಜೆಪಿಗೆ ಆಯ್ಕೆ ಮಾಡಲು ಆಗಿಲ್ಲ. ತಾನೇ ರಾಜಕೀಯದಿಂದ ದೂರ ತಳ್ಳಿದ್ದ ಬಿಎಸ್‌ ಯಡಿಯೂರಪ್ಪ ಅವರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ. ಅಗತ್ಯವಿದ್ದಾಗ ಕಾಲು ಹಿಡಿಯುವುದು, ಅಗತ್ಯವಿಲ್ಲದಾಗ ಕಾಲು ಎಳೆಯುವುದು ಬಿಜೆಪಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದೆ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago