ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ (ನವೆಂಬರ್ 01) ಇಸ್ರೇಲ್ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಹಮಾಸ್ ಕಮಾಂಡರ್ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್ ಜನರು ಮೃತ್ಯುಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.
ಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಗಾಯಗೊಂಡವರಿಗೆ ಚಿಕಿತ್ಸೆಯೂ ದೊರಕದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಇಂಧನ ಮತ್ತು ಔಷಧದ ಕೊರತೆ ತಲೆದೋರಿದೆ ಎಂದು ವರದಿ ವಿವರಿಸಿದೆ.
ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಸೇನೆ ವೈಮಾನಿ ದಾಳಿ ನಡೆಸುವ ಮೂಲಕ ಯುದ್ಧಕ್ಕೆ ನಾಂದಿ ಹಾಡಿತ್ತು.
ಹಮಾಸ್ ಮತ್ತು ಇಸ್ರೇಲ್ ಯುದ್ಧದಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಜನರು ಗಾಯಗೊಂಡು, ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಅಕ್ಟೋಬರ್ 7ರ ದಾಳಿಯ ರೂವಾರಿ ಹಮಾಸ್ ನ ಕಮಾಂಡರ್ ಇಬ್ರಾಹಿಂ ಬಿಯಾರಿ ವೈಮಾನಿಕ ದಾಳಿಯಲ್ಲಿ ಕೊನೆಯುಸಿರೆಳೆದಿರುವುದಾಗಿ ಇಸ್ರೇಲ್ ಡಿಫೆನ್ಸ್ ಫೋರ್ಸ್ (IDF) ತಿಳಿಸಿದೆ.
1948ರಿಂದ ಇಸ್ರೇಲ್ ಯುದ್ಧದ ಪರಿಣಾಮ ಜಬಾಲಿಯಾ ನಿರಾಶ್ರಿತರಿಗೆ ತವರು ಮನೆ ಇದ್ದಂತಾಗಿದೆ. ಗಾಜಾಪಟ್ಟಿಯಲ್ಲಿ ವಾಸ್ತವ್ಯ ಹೂಡಿರುವವರು ತಕ್ಷಣವೇ ಬೇರೆಡೆ ಸ್ಥಳಾಂತರಗೊಳ್ಳುವಂತೆ ಇಸ್ರೇಲ್ ಎಚ್ಚರಿಕೆ ನೀಡಿದ್ದರೂ ಕೂಡಾ ನೂರಾರು ಮಂದಿ ಗಾಜಾದಲ್ಲಿಯೇ ಉಳಿದಕೊಂಡಿದ್ದು, ಬಾಂಬ್ ದಾಳಿಯಲ್ಲಿ ನೂರಾರು ಕಟ್ಟಡಗಳು ಧ್ವಂಸಗೊಂಡಿರುವುದಾಗಿ ಹಮಾಸ್ ತಿಳಿಸಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…