BREAKING NEWS

ಗಾಜಾ ಶಿಬಿರದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ: ಹಮಾಸ್‌ ಕಮಾಂಡರ್‌ ಸೇರಿ 50 ಜನರ ಮೃತ್ಯು

ಜೆರುಸಲೇಂ: ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ (ನವೆಂಬರ್‌ 01) ಇಸ್ರೇಲ್‌ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್‌ ದಾಳಿ ನಡೆಸಿದ ಪರಿಣಾಮ ಹಮಾಸ್‌ ಕಮಾಂಡರ್‌ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್‌ ಜನರು ಮೃತ್ಯುಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಗಾಯಗೊಂಡವರಿಗೆ ಚಿಕಿತ್ಸೆಯೂ ದೊರಕದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಇಂಧನ ಮತ್ತು ಔಷಧದ ಕೊರತೆ ತಲೆದೋರಿದೆ ಎಂದು ವರದಿ ವಿವರಿಸಿದೆ.

ಅಕ್ಟೋಬರ್‌ 7ರಂದು ಹಮಾಸ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಸೇನೆ ವೈಮಾನಿ ದಾಳಿ ನಡೆಸುವ ಮೂಲಕ ಯುದ್ಧಕ್ಕೆ ನಾಂದಿ ಹಾಡಿತ್ತು.

ಹಮಾಸ್‌ ಮತ್ತು ಇಸ್ರೇಲ್‌ ಯುದ್ಧದಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಜನರು ಗಾಯಗೊಂಡು, ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಅಕ್ಟೋಬರ್‌ 7ರ ದಾಳಿಯ ರೂವಾರಿ ಹಮಾಸ್‌ ನ ಕಮಾಂಡರ್‌ ಇಬ್ರಾಹಿಂ ಬಿಯಾರಿ ವೈಮಾನಿಕ ದಾಳಿಯಲ್ಲಿ ಕೊನೆಯುಸಿರೆಳೆದಿರುವುದಾಗಿ ಇಸ್ರೇಲ್‌ ಡಿಫೆನ್ಸ್‌ ಫೋರ್ಸ್‌ (IDF) ತಿಳಿಸಿದೆ.

1948ರಿಂದ ಇಸ್ರೇಲ್‌ ಯುದ್ಧದ ಪರಿಣಾಮ ಜಬಾಲಿಯಾ ನಿರಾಶ್ರಿತರಿಗೆ ತವರು ಮನೆ ಇದ್ದಂತಾಗಿದೆ. ಗಾಜಾಪಟ್ಟಿಯಲ್ಲಿ ವಾಸ್ತವ್ಯ ಹೂಡಿರುವವರು ತಕ್ಷಣವೇ ಬೇರೆಡೆ ಸ್ಥಳಾಂತರಗೊಳ್ಳುವಂತೆ ಇಸ್ರೇಲ್‌ ಎಚ್ಚರಿಕೆ ನೀಡಿದ್ದರೂ ಕೂಡಾ ನೂರಾರು ಮಂದಿ ಗಾಜಾದಲ್ಲಿಯೇ ಉಳಿದಕೊಂಡಿದ್ದು, ಬಾಂಬ್‌ ದಾಳಿಯಲ್ಲಿ ನೂರಾರು ಕಟ್ಟಡಗಳು ಧ್ವಂಸಗೊಂಡಿರುವುದಾಗಿ ಹಮಾಸ್‌ ತಿಳಿಸಿದೆ.

andolanait

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

16 mins ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

20 mins ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

25 mins ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

29 mins ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

34 mins ago