BREAKING NEWS

ಗಾಜಾ ಶಿಬಿರದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ: ಹಮಾಸ್‌ ಕಮಾಂಡರ್‌ ಸೇರಿ 50 ಜನರ ಮೃತ್ಯು

ಜೆರುಸಲೇಂ: ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ (ನವೆಂಬರ್‌ 01) ಇಸ್ರೇಲ್‌ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್‌ ದಾಳಿ ನಡೆಸಿದ ಪರಿಣಾಮ ಹಮಾಸ್‌ ಕಮಾಂಡರ್‌ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್‌ ಜನರು ಮೃತ್ಯುಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಗಾಯಗೊಂಡವರಿಗೆ ಚಿಕಿತ್ಸೆಯೂ ದೊರಕದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಇಂಧನ ಮತ್ತು ಔಷಧದ ಕೊರತೆ ತಲೆದೋರಿದೆ ಎಂದು ವರದಿ ವಿವರಿಸಿದೆ.

ಅಕ್ಟೋಬರ್‌ 7ರಂದು ಹಮಾಸ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಸೇನೆ ವೈಮಾನಿ ದಾಳಿ ನಡೆಸುವ ಮೂಲಕ ಯುದ್ಧಕ್ಕೆ ನಾಂದಿ ಹಾಡಿತ್ತು.

ಹಮಾಸ್‌ ಮತ್ತು ಇಸ್ರೇಲ್‌ ಯುದ್ಧದಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಜನರು ಗಾಯಗೊಂಡು, ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಅಕ್ಟೋಬರ್‌ 7ರ ದಾಳಿಯ ರೂವಾರಿ ಹಮಾಸ್‌ ನ ಕಮಾಂಡರ್‌ ಇಬ್ರಾಹಿಂ ಬಿಯಾರಿ ವೈಮಾನಿಕ ದಾಳಿಯಲ್ಲಿ ಕೊನೆಯುಸಿರೆಳೆದಿರುವುದಾಗಿ ಇಸ್ರೇಲ್‌ ಡಿಫೆನ್ಸ್‌ ಫೋರ್ಸ್‌ (IDF) ತಿಳಿಸಿದೆ.

1948ರಿಂದ ಇಸ್ರೇಲ್‌ ಯುದ್ಧದ ಪರಿಣಾಮ ಜಬಾಲಿಯಾ ನಿರಾಶ್ರಿತರಿಗೆ ತವರು ಮನೆ ಇದ್ದಂತಾಗಿದೆ. ಗಾಜಾಪಟ್ಟಿಯಲ್ಲಿ ವಾಸ್ತವ್ಯ ಹೂಡಿರುವವರು ತಕ್ಷಣವೇ ಬೇರೆಡೆ ಸ್ಥಳಾಂತರಗೊಳ್ಳುವಂತೆ ಇಸ್ರೇಲ್‌ ಎಚ್ಚರಿಕೆ ನೀಡಿದ್ದರೂ ಕೂಡಾ ನೂರಾರು ಮಂದಿ ಗಾಜಾದಲ್ಲಿಯೇ ಉಳಿದಕೊಂಡಿದ್ದು, ಬಾಂಬ್‌ ದಾಳಿಯಲ್ಲಿ ನೂರಾರು ಕಟ್ಟಡಗಳು ಧ್ವಂಸಗೊಂಡಿರುವುದಾಗಿ ಹಮಾಸ್‌ ತಿಳಿಸಿದೆ.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

4 hours ago