BREAKING NEWS

ಪ್ಯಾಲೆಸ್ತೀನ್‌ ಅಂಬುಲೆನ್ಸ್ ಮೇಲೆ ಇಸ್ರೇಲ್ ದಾಳಿ : 15 ಸಾವು 6 ಮಂದಿ ಗಂಭೀರ

ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್‌ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ ಸಿಲುಕಿರುವ ನಾಗರಿಕರಿಗೆ ನೆರವು ನೀಡಲು ಗಾಜಾದಲ್ಲಿ ಕದನ ವಿರಾಮ ಘೋಷಿಸುವಂತೆ ಇಸ್ರೇಲ್‍ಗೆ ಒತ್ತಾಯಿಸಿದೆ. ಅದಾಗಿಯೂ ಅಮೆರಿಕಾದ ಸಲಹೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ತಿರಸ್ಕರಿಸಿದ್ದಾರೆ. ಅಲ್ಲದೇ ಒತ್ತೆಯಾಳುಗಳನ್ನು ಬಿಡಿಸಲು ಕ್ರಮಕೈಗೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಯಾವುದೇ ಕದನ ವಿರಾಮವಿಲ್ಲದೆ ಒಂದು ತಿಂಗಳು ಸಮೀಪಿಸಿದೆ. ಈ ಯುದ್ಧ ಹಮಾಸ್ ಉಗ್ರರು ಒತ್ತೆಯಾಳುಗಳನ್ನು ಬಿಡುಗಡೆ ಮಾಡವವರೆಗೂ ಮುಂದುವರಿಯುತ್ತದೆ. ಒತ್ತೆಯಾಳುಗಳ ಬಿಡುಗಡೆಗೆ ಇನ್ನೂ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನೇತಾನ್ಯಾಹು ಹೇಳಿದ್ದಾರೆ.

ಯುದ್ಧದ ಆರಂಭದ ನಂತರ ಟೆಲ್ ಅವೀವ್‍ನಲ್ಲಿ ನೇತನ್ಯಾಹು ಅವರನ್ನು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮೂರನೇ ಬಾರಿ ಭೇಟಿಯಾಗಿದ್ದರು. ಈ ವೇಳೆ ಗಾಜಾಕ್ಕೆ ನೆರವು ನೀಡಲು ಮಾನವೀಯ ದೃಷ್ಟಿಯಿಂದ ವಿರಾಮದ ಬಗ್ಗೆ ಪ್ರಸ್ತಾಪಿಸಿದ್ದರು. ಆಂಟೋನಿಯವರ ಸಲಹೆಯನ್ನು ಇಸ್ರೇಲ್ ಅಧ್ಯಕ್ಷ ತಿರಸ್ಕರಿಸಿದ್ದಾರೆ.

ಯುದ್ಧದಲ್ಲಿ ಇಲ್ಲಿಯವರೆಗೂ ಹಮಾಸ್ ನಡೆಸಿದ ದಾಳಿಯಲ್ಲಿ 1,400ಕ್ಕೂ ಹೆಚ್ಚಿನ ಇಸ್ರೇಲ್ ನಾಗರಿಕರು ಸಾವಿಗೀಡಾಗಿದ್ದಾರೆ. ಬಳಿಕ ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ 3,826 ಮಕ್ಕಳು ಸೇರಿದಂತೆ ಕನಿಷ್ಠ 9,227 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ.

lokesh

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago