ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ ಸಿಲುಕಿರುವ ನಾಗರಿಕರಿಗೆ ನೆರವು ನೀಡಲು ಗಾಜಾದಲ್ಲಿ ಕದನ ವಿರಾಮ ಘೋಷಿಸುವಂತೆ ಇಸ್ರೇಲ್ಗೆ ಒತ್ತಾಯಿಸಿದೆ. ಅದಾಗಿಯೂ ಅಮೆರಿಕಾದ ಸಲಹೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ತಿರಸ್ಕರಿಸಿದ್ದಾರೆ. ಅಲ್ಲದೇ ಒತ್ತೆಯಾಳುಗಳನ್ನು ಬಿಡಿಸಲು ಕ್ರಮಕೈಗೊಳ್ಳುವುದಾಗಿ ಹೇಳಿಕೊಂಡಿದ್ದಾರೆ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಯಾವುದೇ ಕದನ ವಿರಾಮವಿಲ್ಲದೆ ಒಂದು ತಿಂಗಳು ಸಮೀಪಿಸಿದೆ. ಈ ಯುದ್ಧ ಹಮಾಸ್ ಉಗ್ರರು ಒತ್ತೆಯಾಳುಗಳನ್ನು ಬಿಡುಗಡೆ ಮಾಡವವರೆಗೂ ಮುಂದುವರಿಯುತ್ತದೆ. ಒತ್ತೆಯಾಳುಗಳ ಬಿಡುಗಡೆಗೆ ಇನ್ನೂ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನೇತಾನ್ಯಾಹು ಹೇಳಿದ್ದಾರೆ.
ಯುದ್ಧದ ಆರಂಭದ ನಂತರ ಟೆಲ್ ಅವೀವ್ನಲ್ಲಿ ನೇತನ್ಯಾಹು ಅವರನ್ನು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮೂರನೇ ಬಾರಿ ಭೇಟಿಯಾಗಿದ್ದರು. ಈ ವೇಳೆ ಗಾಜಾಕ್ಕೆ ನೆರವು ನೀಡಲು ಮಾನವೀಯ ದೃಷ್ಟಿಯಿಂದ ವಿರಾಮದ ಬಗ್ಗೆ ಪ್ರಸ್ತಾಪಿಸಿದ್ದರು. ಆಂಟೋನಿಯವರ ಸಲಹೆಯನ್ನು ಇಸ್ರೇಲ್ ಅಧ್ಯಕ್ಷ ತಿರಸ್ಕರಿಸಿದ್ದಾರೆ.
ಯುದ್ಧದಲ್ಲಿ ಇಲ್ಲಿಯವರೆಗೂ ಹಮಾಸ್ ನಡೆಸಿದ ದಾಳಿಯಲ್ಲಿ 1,400ಕ್ಕೂ ಹೆಚ್ಚಿನ ಇಸ್ರೇಲ್ ನಾಗರಿಕರು ಸಾವಿಗೀಡಾಗಿದ್ದಾರೆ. ಬಳಿಕ ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ 3,826 ಮಕ್ಕಳು ಸೇರಿದಂತೆ ಕನಿಷ್ಠ 9,227 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…