BREAKING NEWS

ಗಾಜಾ ಮೇಲೆ ದಾಳಿ ಹೆಚ್ಚಿಸಿದ ಇಸ್ರೇಲ್: 24 ಗಂಟೆಗಳಲ್ಲಿ 700 ಮಂದಿ ಸಾವು

ಜೆರುಸಲೇಂ: ಹಮಾಸ್‌ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್‌, ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಂಗಳವಾರ ತಡರಾತ್ರಿ ಗಾಜಾ ನಗರದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು ಹಮಾಸ್ ಉಗ್ರರೇ ಮಾಹಿತಿ ನೀಡಿದ್ದಾರೆ.

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಮರ ಆರಂಭವಾದ ಬಳಿಕ ಇಸ್ರೇಲ್‌ ನಡೆಸಿದ ಭೀಕರ ದಾಳಿ ಇದಾಗಿದೆ ಎಂದು ತಿಳಿದುಬಂದಿದೆ.

ಹಮಾಸ್‌ನ 400 ಪ್ರಮುಖ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್‌ ರಾತ್ರೋರಾತ್ರಿ ಗಾಜಾ ನಗರದ ಮೇಲೆ ದಾಳಿ ನಡೆಸಿದೆ. ಆದರೆ, ದಾಳಿಯಲ್ಲಿ 700ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಹಮಾಸ್ ಹೇಳಿಕೊಂಡಿದೆ.

ದಾಳಿಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲು ಕೂಡ ಆಗುತ್ತಿಲ್ಲ ಎಂದು ತಿಳಿಸಿದೆ.
ಈ ನಡುವೆ ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧ ಆರಂಭವಾಗಿ ಇಂದಿಗೆ 20 ದಿನಗಳು ಕಳೆದಿದ್ದು, ದಾಳಿಯಲ್ಲಿ ಇದುವರೆಗೆ ಇದುವರೆಗೆ 7,100 ಜನ ಮೃತಪಟ್ಟಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇಸ್ರೇಲ್‌ ಮೇಲೆ ಹಮಾಸ್‌ ಮಾಡಿದ ದಾಳಿಯಿಂದ ಇದುವರೆಗೆ 1,400 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಗಾಜಾ ನಗರದಲ್ಲಿ ಇಸ್ರೇಲ್‌ ಸತತ ದಾಳಿಗೆ 5,700ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಜಾ ನಗರದಲ್ಲಂತೂ ಸಾವಿರಾರು ಜನ ಗಾಯಗೊಂಡಿದ್ದು, ಲಕ್ಷಾಂತರ ನಾಗರಿಕರು ನಿರಾಶ್ರಿತರಾಗಿದ್ದಾರೆ,

ಈ ನಡುವೆ ಗಾಜಾ ಗಡಿಯಲ್ಲಿ ಸಾವಿರಾರು ಸೈನಿಕರು, ನೂರಾರು ಯುದ್ಧ ಟ್ಯಾಂಕರ್‌ಗಳನ್ನು ನಿಯೋಜಿಸಿರುವ ಇಸ್ರೇಲ್, ಪೂರ್ಣ ಪ್ರಮಾಣದ ದಾಳಿ ನಡೆಸಲು ಇಸ್ರೇಲ್‌ ಸಜ್ಜಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಇಸ್ರೇಲ್‌ ಸೈನಿಕರು ಗಾಜಾ ನಗರದ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇದರ ಭೀತಿಯಿಂದಾಗಿಯೇ ಹಮಾಸ್‌ ಉಗ್ರರು ಇಸ್ರೇಲ್‌ನ ಇಬ್ಬರು ಒತ್ತೆಯಾಳುಗಳನ್ನು ಸೋಮವಾರ ಬಿಡುಗಡೆ ಮಾಡಿದ್ದರು. ಇಷ್ಟಾದರೂ ಕೆಲವು ಉಗ್ರರು ರಕ್ಕಸ ಕೃತ್ಯಗಳ ಮೂಲಕ ನಾಗರಿಕರನ್ನು ಹಿಂಸಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಅಮೆರಿಕಾ ಕಳವಳ
ಏತನ್ಮಧ್ಯೆ ಇಸ್ರೇಲ್​ ಹಾಗೂ ಹಮಾಸ್​ ನಡುವಿನ ನಿಲ್ಲದ ಯುದ್ಧದ ಬಗ್ಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಳವಳ ವ್ಯಕ್ತಪಡಿಸಿದೆ.

ನಿರಂತರವಾಗಿ ನಡೆಯುತ್ತಿರುವ ಬಾಂಬ್​ ದಾಳಿಗಳಿಂದ ಗಾಜಾದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಯುದ್ಧ ಆ ಪ್ರದೇಶದಲ್ಲಿ ವ್ಯಾಪಕ ಸಂಘರ್ಷವನ್ನು ಉಂಟು ಮಾಡಬಹುದು ಎಂದು ಹೇಳಿದೆ.

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

6 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

8 hours ago