BREAKING NEWS

ಗಾಜಾ ಮೇಲೆ ದಾಳಿ ಹೆಚ್ಚಿಸಿದ ಇಸ್ರೇಲ್: 24 ಗಂಟೆಗಳಲ್ಲಿ 700 ಮಂದಿ ಸಾವು

ಜೆರುಸಲೇಂ: ಹಮಾಸ್‌ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್‌, ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಂಗಳವಾರ ತಡರಾತ್ರಿ ಗಾಜಾ ನಗರದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು ಹಮಾಸ್ ಉಗ್ರರೇ ಮಾಹಿತಿ ನೀಡಿದ್ದಾರೆ.

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಮರ ಆರಂಭವಾದ ಬಳಿಕ ಇಸ್ರೇಲ್‌ ನಡೆಸಿದ ಭೀಕರ ದಾಳಿ ಇದಾಗಿದೆ ಎಂದು ತಿಳಿದುಬಂದಿದೆ.

ಹಮಾಸ್‌ನ 400 ಪ್ರಮುಖ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್‌ ರಾತ್ರೋರಾತ್ರಿ ಗಾಜಾ ನಗರದ ಮೇಲೆ ದಾಳಿ ನಡೆಸಿದೆ. ಆದರೆ, ದಾಳಿಯಲ್ಲಿ 700ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಹಮಾಸ್ ಹೇಳಿಕೊಂಡಿದೆ.

ದಾಳಿಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲು ಕೂಡ ಆಗುತ್ತಿಲ್ಲ ಎಂದು ತಿಳಿಸಿದೆ.
ಈ ನಡುವೆ ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧ ಆರಂಭವಾಗಿ ಇಂದಿಗೆ 20 ದಿನಗಳು ಕಳೆದಿದ್ದು, ದಾಳಿಯಲ್ಲಿ ಇದುವರೆಗೆ ಇದುವರೆಗೆ 7,100 ಜನ ಮೃತಪಟ್ಟಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇಸ್ರೇಲ್‌ ಮೇಲೆ ಹಮಾಸ್‌ ಮಾಡಿದ ದಾಳಿಯಿಂದ ಇದುವರೆಗೆ 1,400 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಗಾಜಾ ನಗರದಲ್ಲಿ ಇಸ್ರೇಲ್‌ ಸತತ ದಾಳಿಗೆ 5,700ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಜಾ ನಗರದಲ್ಲಂತೂ ಸಾವಿರಾರು ಜನ ಗಾಯಗೊಂಡಿದ್ದು, ಲಕ್ಷಾಂತರ ನಾಗರಿಕರು ನಿರಾಶ್ರಿತರಾಗಿದ್ದಾರೆ,

ಈ ನಡುವೆ ಗಾಜಾ ಗಡಿಯಲ್ಲಿ ಸಾವಿರಾರು ಸೈನಿಕರು, ನೂರಾರು ಯುದ್ಧ ಟ್ಯಾಂಕರ್‌ಗಳನ್ನು ನಿಯೋಜಿಸಿರುವ ಇಸ್ರೇಲ್, ಪೂರ್ಣ ಪ್ರಮಾಣದ ದಾಳಿ ನಡೆಸಲು ಇಸ್ರೇಲ್‌ ಸಜ್ಜಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಇಸ್ರೇಲ್‌ ಸೈನಿಕರು ಗಾಜಾ ನಗರದ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇದರ ಭೀತಿಯಿಂದಾಗಿಯೇ ಹಮಾಸ್‌ ಉಗ್ರರು ಇಸ್ರೇಲ್‌ನ ಇಬ್ಬರು ಒತ್ತೆಯಾಳುಗಳನ್ನು ಸೋಮವಾರ ಬಿಡುಗಡೆ ಮಾಡಿದ್ದರು. ಇಷ್ಟಾದರೂ ಕೆಲವು ಉಗ್ರರು ರಕ್ಕಸ ಕೃತ್ಯಗಳ ಮೂಲಕ ನಾಗರಿಕರನ್ನು ಹಿಂಸಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಅಮೆರಿಕಾ ಕಳವಳ
ಏತನ್ಮಧ್ಯೆ ಇಸ್ರೇಲ್​ ಹಾಗೂ ಹಮಾಸ್​ ನಡುವಿನ ನಿಲ್ಲದ ಯುದ್ಧದ ಬಗ್ಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಳವಳ ವ್ಯಕ್ತಪಡಿಸಿದೆ.

ನಿರಂತರವಾಗಿ ನಡೆಯುತ್ತಿರುವ ಬಾಂಬ್​ ದಾಳಿಗಳಿಂದ ಗಾಜಾದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಯುದ್ಧ ಆ ಪ್ರದೇಶದಲ್ಲಿ ವ್ಯಾಪಕ ಸಂಘರ್ಷವನ್ನು ಉಂಟು ಮಾಡಬಹುದು ಎಂದು ಹೇಳಿದೆ.

andolanait

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

45 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago