BREAKING NEWS

ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ: ಈವರೆಗೂ 34 ಪತ್ರಕರ್ತರ ಸಾವು

ಟೆಲ್ ಅವಿವ್: ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿದ ಸಂದರ್ಭದಿಂದ ಈವರೆಗೂ ಒಟ್ಟು 34 ಪತ್ರಕರ್ತರು ಜೀವ ಕಳೆದುಕೊಂಡಿದ್ದಾರೆ ಎಂದು ‘ಮಿಡ್ಲ್ ಈಸ್ಟ್ ಮಾನಿಟರ್’ ವರದಿ ಮಾಡಿದೆ. ಇಸ್ರೇಲ್ ಮೇಲಿನ ಹಮಾಸ್ ಬಂಡುಕೋರರ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗಳಲ್ಲಿ ಮೃತಪಟ್ಟ ಪತ್ರಕರ್ತರ ಪಟ್ಟಿಯನ್ನು ಗಾಜಾದ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದೆ.

ಮೂವರು ಮಹಿಳೆಯರು ಸೇರಿದಂತೆ 34 ಪತ್ರಕರ್ತರು ದಾಳಿಗಳಲ್ಲಿ ಬಲಿಯಾಗಿದ್ದಾರೆ. ಇನ್ನೂ ಅನೇಕ ಪತ್ರಕರ್ತರು ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಅಕ್ಟೋಬರ್ 25ರಂದು ನುಸೀರಾತ್ ನಿರಾಶ್ರಿತರ ಶಿಬಿರದಲ್ಲಿನ ಮನೆಯೊಂದರ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಲ್ ಜಜೀರಾ ಪತ್ರಕರ್ತ ವಾಯೆಲ್ ಅಲ್ ದಾಹದುಹ್ ಅವರು ಹೆಂಡತಿ, ಮಗ ಹಾಗೂ ಮಗಳು ಸೇರಿದಂತೆ ಕುಟುಂಬದ ಸದಸ್ಯರನ್ನು ಕಳೆದುಕೊಂಡಿದ್ದರು.

ನಿರಾಶ್ರಿತರ ಶಿಬಿರದ ಮೇಲೆ ದಾಳಿ

ಸೋಮವಾರ ಇಸ್ರೇಲ್ ಪಡೆಗಳು ಪ್ಯಾಲೆಸ್ತೀನ್ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಬ್ರಾಡ್‌ಕಾಸ್ಟ್ ಎಂಜಿನಿಯರ್ ಮುಹಮ್ಮದ್ ಅಬು ಅಲ್ ಕುಸ್ಮಾನ್ ಅವರು ತಮ್ಮ ಕುಟುಂಬದ 19 ಸದಸ್ಯರನ್ನು ಕಳೆದುಕೊಂಡಿದ್ದಾರೆ ಎಂದು ಅಲ್ ಜಜೀರಾ ತಿಳಿಸಿದೆ.

ಇಸ್ರೇಲ್- ಲೆಬನಾನ್ ಗಡಿ ಭಾಗದಲ್ಲಿ ನಡೆದ ಸಂಘರ್ಷದಲ್ಲಿ ಇಸ್ರೇಲ್‌ನ ಗುಂಡೇಟಿಗೆ ಲೆಬನಾನ್ ಪತ್ರಕರ್ತರೊಬ್ಬರು ಮೃತಪಟ್ಟಿದ್ದಾರೆ. ಹಮಾಸ್ ನಡೆಸಿದ ದಾಳಿಗಳಲ್ಲಿ ಇಸ್ರೇಲ್ ತನ್ನ ನಾಲ್ವರು ಪತ್ರಕರ್ತರನ್ನು ಕಳೆದುಕೊಂಡಿದೆ. ಈವರೆಗೂ ಎಂಟು ಮಂದಿ ಪತ್ರಕರ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ), ಅಕ್ಟೋಬರ್ 7ರಿಂದ ಸುಮಾರು 9 ಮಂದಿ ಪತ್ರಕರ್ತರು ನಾಪತ್ತೆಯಾಗಿದ್ದಾರೆ ಅಥವಾ ಬಂಧಿತರಾಗಿದ್ದಾರೆ ಎಂದು ತಿಳಿಸಿದೆ.

ಖಾತರಿ ನೀಡಲು ಸಾಧ್ಯವಿಲ್ಲ ಎಂದ ಐಡಿಎಫ್

ಇಸ್ರೇಲಿ ದಾಳಿಗಳಲ್ಲಿ ತನ್ನ ಪತ್ರಕರ್ತರನ್ನು ಗುರಿ ಮಾಡುವುದಿಲ್ಲ ಎಂಬ ಭರವಸೆ ನೀಡುವಂತೆ ಏಜೆನ್ಸ್ ಫ್ರಾನ್ಸ್ ಪ್ರೆಸ್ ಮತ್ತು ರಾಯಿಟರ್ಸ್ ಮನವಿ ಮಾಡಿದ್ದವು. ಆದರೆ ಗಾಜಾ ಪಟ್ಟಿ ಮೇಲಿನ ತಮ್ಮ ಕಾರ್ಯಾಚರಣೆಯಲ್ಲಿ ಪತ್ರಕರ್ತರ ಸುರಕ್ಷತೆ ಬಗ್ಗೆ ಖಾತರಿ ನೀಡಲು ಸಾಧ್ಯವಿಲ್ಲ ಎಂದು ಇಸ್ರೇಲ್ ಭದ್ರತಾ ಪಡೆ (ಐಡಿಎಫ್) ಹೇಳಿದೆ.

“ಗಾಜಾದ ಎಲ್ಲೆಡೆಯೂ ಹಮಾಸ್ ಮಿಲಿಟರಿ ಚಟುವಟಿಕೆಗಳ ಮೇಲೆ ಐಡಿಎಫ್ ದಾಳಿ ನಡೆಸುತ್ತಿದೆ. ಹಮಾಸ್ ಉದ್ದೇಶಪೂರ್ವಕವಾಗಿಯೇ ತನ್ನ ಸೇನಾ ಕಾರ್ಯಾಚರಣೆಗಳನ್ನು ಪತ್ರಕರ್ತರು ಹಾಗೂ ನಾಗರಿಕರು ಇರುವ ಪ್ರದೇಶಗಳಲ್ಲಿ ನಡೆಸುತ್ತಿದೆ. ನಿಮ್ಮ ಉದ್ಯೋಗಿಗಳ ಸುರಕ್ಷತೆಗೆ ನಾವು ಖಾತರಿ ನೀಡಲು ಸಾಧ್ಯವಿಲ್ಲ ಹಾಗೂ ಅವರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿಮಗೆ ಮನವಿ ಮಾಡುತ್ತೇವೆ” ಎಂದು ಐಡಿಎಫ್ ತಿಳಿಸಿದೆ.

ಇತರೆ ಪತ್ರಕರ್ತರನ್ನು ಹತ್ಯೆ ಮಾಡುವ, ನಾಪತ್ತೆಯಾದ, ಬಂಧಿಸಿದ, ಗಾಯಗೊಳಿಸಿದ ಅಥವಾ ಬೆದರಿಸುವ ಮತ್ತು ಮಾಧ್ಯಮ ಕಚೇರಿಗಳು ಹಾಗೂ ಪತ್ರಕರ್ತರ ಮನೆಗಳಿಗೆ ಹಾನಿ ಮಾಡುವ ಘಟನೆಗಳ ಖಚಿತವಲ್ಲದ ಅನೇಕ ವರದಿಗಳನ್ನು ಪರಿಶೀಲಿಸುತ್ತಿರುವುದಾಗಿ ಸಿಪಿಜೆ ಹೇಳಿದೆ.

andolanait

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

39 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago