ನವದೆಹಲಿ : ಸೂರ್ಯಯಾನ, ಚಂದ್ರಯಾನದ ನಂತರ ಇಸ್ರೋ ಮತ್ತೊಂದು ಮೈಲುಗಲ್ಲಿಗೆ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜಾಗಿದ್ದು, ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ.
ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ, ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದು, ಮಾನವ ಸಹಿತ ಗಗನಯಾನದ ಯೋಜನೆ ಸಿದ್ಧ ಮಾಡಿದೆ. ಈ ಗಗನಯಾನಕ್ಕೂ ಮುನ್ನ ಪರೀಕ್ಷಾರ್ಥ ಉಡಾವಣೆಯನ್ನು ಈ ತಿಂಗಳಾಂತ್ಯಕ್ಕೆ ನಡೆಸಲಾಗುವುದು ಎಂದು ಇಸ್ರೋ ಕೆಲ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದೆ.
ಮನುಷ್ಯನನ್ನು ಬಾಹ್ಯಾಕಾಶಕ್ಕೆ ಕಳಿಸುವ ಮುನ್ನ ಕೆಲವು ಅಂತರಾಷ್ಟ್ರೀಯ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಮನುಷ್ಯನನ್ನು ಆಕಾಶಕ್ಕೆ ಕರೆದುಕೊಂಡು ಹೋಗುವ ಯೂನಿಟ್ಗೆ ಪ್ಯಾಡ್ ಅಬಾಟ್ ಎಂದು ಕರೆಯಲಾಗುತ್ತದೆ. ಈ ಪ್ಯಾಡ್ ಅಬಾಟ್ ಅನ್ನು ರಾಕೆಟ್ ಇರಿಸಿ ಪ್ರಯೋಗ ಮಾಡಲಾಗುತ್ತಿದೆ. ಇದನ್ನೇ ಗಗನಯಾನ ‘ಟಿವಿ-ಡಿ1’ ಬಾಹ್ಯಾಕಾಶನೌಕೆ ಉಡ್ಡಯನ ಎನ್ನಲಾಗುತ್ತದೆ.
ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಉದ್ದೇಶಿತ ರೀತಿಯಲ್ಲಿ ಕಾರ್ಯಾಚರಿಸುತ್ತವೆಯೇ ಎನ್ನುವುದು ಖಾತ್ರಿಯಾಗಲಿದೆ. ಇದು ಗಗನಯಾತ್ರಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ.
ಪರೀಕ್ಷೆಗಳನ್ನು ನಡೆಸುವ ಮೂಲಕ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳಲು ಅವಶ್ಯಕವಾದ ಜೀವ ಬೆಂಬಲ ವ್ಯವಸ್ಥೆ ಹಾಗೂ ಬಾಹ್ಯಾಕಾಶ ಕ್ಯಾಪ್ಸೂಲ್ ಸೇರಿದಂತೆ ವಿವಿಧ ಆಧುನಿಕ ತಂತ್ರಜ್ಞಾನಗಳ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯ.
ಸಮರ್ಪಕವಾಗಿ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳು ಹಾಗೂ ಅಪಾಯಗಳನ್ನು ಗುರುತಿಸಿ, ನೈಜ ಮಾನವ ಸಹಿತ ಯೋಜನಾ ಜಾರಿಗೂ ಮುನ್ನವೇ ಅದನ್ನು ಸರಿಪಡಿಸಲು ಸಾಧ್ಯ.
ಸಂಪೂರ್ಣ ಪರೀಕ್ಷೆಗಳನ್ನು ನಡೆಸುವುದರಿಂದ, ಗಗನಯಾತ್ರಿಗಳು ಮತ್ತು ಭೂ ಸಿಬ್ಬಂದಿಗೆ ಪರಿಪೂರ್ಣ ತರಬೇತಿ ಲಭಿಸುತ್ತದೆ. ಎಲ್ಲಾ ಉಪಕರಣಗಳನ್ನು, ಕಾರ್ಯಾಚರಣೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯ.
ಎಲ್ಲಾ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಕಾರ್ಯಾಚರಿಸುತ್ತಿವೆ ಎಂದು ಖಾತ್ರಿಪಡಿಸಿಕೊಳ್ಳುವುದರಿಂದ ಯೋಜನೆಯ ಯಶಸ್ಸು ಸಾಧಿಸುವ ಸಾಧ್ಯತೆಗಳು ಹೆಚ್ಚಾಗಿ, ಗಗನಯಾನ ಯೋಜನೆಯ ಗುರಿಗಳನ್ನು ಸಾಧಿಸಲು ನೆರವಾಗುತ್ತದೆ.
ಈ ಮಾನವಸಹಿತ ಗಗನಯಾನಕ್ಕೂ ಮುನ್ನ ಮೂರು ಟೆಸ್ಟ್ಗಳಿದ್ದು, ಮುಂದಿನ ವರ್ಷ ಮತ್ತೊಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು. ‘ವ್ಯೋಮ ಮಿತ್ರ’ ಹೆಸರಿನ ಮಹಿಳಾ ರೊಬೋಟ್ ಅನ್ನು ಕಳುಹಿಸಲಾಗುವುದು ಎಂದು ಇಸ್ರೋ ಹೇಳಿದೆ. ನಂತರ ಗಗನಯಾನಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಪ್ಲಾನ್ ಮಾಡಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…