BREAKING NEWS

ಮಾನವ ಸಹಿತ ಗಗನಯಾನಕ್ಕೆ ಸಜ್ಜಾದ ಇಸ್ರೋ

ನವದೆಹಲಿ : ಸೂರ್ಯಯಾನ, ಚಂದ್ರಯಾನದ ನಂತರ ಇಸ್ರೋ ಮತ್ತೊಂದು ಮೈಲುಗಲ್ಲಿಗೆ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜಾಗಿದ್ದು, ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ, ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದು, ಮಾನವ ಸಹಿತ ಗಗನಯಾನದ ಯೋಜನೆ ಸಿದ್ಧ ಮಾಡಿದೆ. ಈ ಗಗನಯಾನಕ್ಕೂ ಮುನ್ನ ಪರೀಕ್ಷಾರ್ಥ ಉಡಾವಣೆಯನ್ನು ಈ ತಿಂಗಳಾಂತ್ಯಕ್ಕೆ ನಡೆಸಲಾಗುವುದು ಎಂದು ಇಸ್ರೋ ಕೆಲ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದೆ.

ಮನುಷ್ಯನನ್ನು ಬಾಹ್ಯಾಕಾಶಕ್ಕೆ ಕಳಿಸುವ ಮುನ್ನ ಕೆಲವು ಅಂತರಾಷ್ಟ್ರೀಯ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಮನುಷ್ಯನನ್ನು ಆಕಾಶಕ್ಕೆ ಕರೆದುಕೊಂಡು ಹೋಗುವ ಯೂನಿಟ್‌ಗೆ ಪ್ಯಾಡ್ ಅಬಾಟ್ ಎಂದು ಕರೆಯಲಾಗುತ್ತದೆ. ಈ ಪ್ಯಾಡ್ ಅಬಾಟ್ ಅನ್ನು ರಾಕೆಟ್ ಇರಿಸಿ ಪ್ರಯೋಗ ಮಾಡಲಾಗುತ್ತಿದೆ. ಇದನ್ನೇ ಗಗನಯಾನ ‘ಟಿವಿ-ಡಿ1’ ಬಾಹ್ಯಾಕಾಶನೌಕೆ ಉಡ್ಡಯನ ಎನ್ನಲಾಗುತ್ತದೆ.

ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ‍್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಉದ್ದೇಶಿತ ರೀತಿಯಲ್ಲಿ ಕಾರ್ಯಾಚರಿಸುತ್ತವೆಯೇ ಎನ್ನುವುದು ಖಾತ್ರಿಯಾಗಲಿದೆ. ಇದು ಗಗನಯಾತ್ರಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

ಪರೀಕ್ಷೆಗಳನ್ನು ನಡೆಸುವ ಮೂಲಕ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳಲು ಅವಶ್ಯಕವಾದ ಜೀವ ಬೆಂಬಲ ವ್ಯವಸ್ಥೆ ಹಾಗೂ ಬಾಹ್ಯಾಕಾಶ ಕ್ಯಾಪ್ಸೂಲ್ ಸೇರಿದಂತೆ ವಿವಿಧ ಆಧುನಿಕ ತಂತ್ರಜ್ಞಾನಗಳ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯ.

ಸಮರ್ಪಕವಾಗಿ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳು ಹಾಗೂ ಅಪಾಯಗಳನ್ನು ಗುರುತಿಸಿ, ನೈಜ ಮಾನವ ಸಹಿತ ಯೋಜನಾ ಜಾರಿಗೂ ಮುನ್ನವೇ ಅದನ್ನು ಸರಿಪಡಿಸಲು ಸಾಧ್ಯ.

ಸಂಪೂರ್ಣ ಪರೀಕ್ಷೆಗಳನ್ನು ನಡೆಸುವುದರಿಂದ, ಗಗನಯಾತ್ರಿಗಳು ಮತ್ತು ಭೂ ಸಿಬ್ಬಂದಿಗೆ ಪರಿಪೂರ್ಣ ತರಬೇತಿ ಲಭಿಸುತ್ತದೆ. ಎಲ್ಲಾ ಉಪಕರಣಗಳನ್ನು, ಕಾರ್ಯಾಚರಣೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯ.

ಎಲ್ಲಾ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಕಾರ್ಯಾಚರಿಸುತ್ತಿವೆ ಎಂದು ಖಾತ್ರಿಪಡಿಸಿಕೊಳ್ಳುವುದರಿಂದ ಯೋಜನೆಯ ಯಶಸ್ಸು ಸಾಧಿಸುವ ಸಾಧ್ಯತೆಗಳು ಹೆಚ್ಚಾಗಿ, ಗಗನಯಾನ ಯೋಜನೆಯ ಗುರಿಗಳನ್ನು ಸಾಧಿಸಲು ನೆರವಾಗುತ್ತದೆ.

ಈ ಮಾನವಸಹಿತ ಗಗನಯಾನಕ್ಕೂ ಮುನ್ನ ಮೂರು ಟೆಸ್ಟ್‌ಗಳಿದ್ದು, ಮುಂದಿನ ವರ್ಷ ಮತ್ತೊಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು. ‘ವ್ಯೋಮ ಮಿತ್ರ’ ಹೆಸರಿನ ಮಹಿಳಾ ರೊಬೋಟ್ ಅನ್ನು ಕಳುಹಿಸಲಾಗುವುದು ಎಂದು ಇಸ್ರೋ ಹೇಳಿದೆ. ನಂತರ ಗಗನಯಾನಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಪ್ಲಾನ್ ಮಾಡಿದೆ.

lokesh

Recent Posts

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

36 mins ago

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

4 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

4 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

4 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

4 hours ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

4 hours ago