BREAKING NEWS

ಮಾನವ ಸಹಿತ ಗಗನಯಾನಕ್ಕೆ ಸಜ್ಜಾದ ಇಸ್ರೋ

ನವದೆಹಲಿ : ಸೂರ್ಯಯಾನ, ಚಂದ್ರಯಾನದ ನಂತರ ಇಸ್ರೋ ಮತ್ತೊಂದು ಮೈಲುಗಲ್ಲಿಗೆ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜಾಗಿದ್ದು, ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ, ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದು, ಮಾನವ ಸಹಿತ ಗಗನಯಾನದ ಯೋಜನೆ ಸಿದ್ಧ ಮಾಡಿದೆ. ಈ ಗಗನಯಾನಕ್ಕೂ ಮುನ್ನ ಪರೀಕ್ಷಾರ್ಥ ಉಡಾವಣೆಯನ್ನು ಈ ತಿಂಗಳಾಂತ್ಯಕ್ಕೆ ನಡೆಸಲಾಗುವುದು ಎಂದು ಇಸ್ರೋ ಕೆಲ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದೆ.

ಮನುಷ್ಯನನ್ನು ಬಾಹ್ಯಾಕಾಶಕ್ಕೆ ಕಳಿಸುವ ಮುನ್ನ ಕೆಲವು ಅಂತರಾಷ್ಟ್ರೀಯ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಮನುಷ್ಯನನ್ನು ಆಕಾಶಕ್ಕೆ ಕರೆದುಕೊಂಡು ಹೋಗುವ ಯೂನಿಟ್‌ಗೆ ಪ್ಯಾಡ್ ಅಬಾಟ್ ಎಂದು ಕರೆಯಲಾಗುತ್ತದೆ. ಈ ಪ್ಯಾಡ್ ಅಬಾಟ್ ಅನ್ನು ರಾಕೆಟ್ ಇರಿಸಿ ಪ್ರಯೋಗ ಮಾಡಲಾಗುತ್ತಿದೆ. ಇದನ್ನೇ ಗಗನಯಾನ ‘ಟಿವಿ-ಡಿ1’ ಬಾಹ್ಯಾಕಾಶನೌಕೆ ಉಡ್ಡಯನ ಎನ್ನಲಾಗುತ್ತದೆ.

ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ‍್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಉದ್ದೇಶಿತ ರೀತಿಯಲ್ಲಿ ಕಾರ್ಯಾಚರಿಸುತ್ತವೆಯೇ ಎನ್ನುವುದು ಖಾತ್ರಿಯಾಗಲಿದೆ. ಇದು ಗಗನಯಾತ್ರಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

ಪರೀಕ್ಷೆಗಳನ್ನು ನಡೆಸುವ ಮೂಲಕ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳಲು ಅವಶ್ಯಕವಾದ ಜೀವ ಬೆಂಬಲ ವ್ಯವಸ್ಥೆ ಹಾಗೂ ಬಾಹ್ಯಾಕಾಶ ಕ್ಯಾಪ್ಸೂಲ್ ಸೇರಿದಂತೆ ವಿವಿಧ ಆಧುನಿಕ ತಂತ್ರಜ್ಞಾನಗಳ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯ.

ಸಮರ್ಪಕವಾಗಿ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳು ಹಾಗೂ ಅಪಾಯಗಳನ್ನು ಗುರುತಿಸಿ, ನೈಜ ಮಾನವ ಸಹಿತ ಯೋಜನಾ ಜಾರಿಗೂ ಮುನ್ನವೇ ಅದನ್ನು ಸರಿಪಡಿಸಲು ಸಾಧ್ಯ.

ಸಂಪೂರ್ಣ ಪರೀಕ್ಷೆಗಳನ್ನು ನಡೆಸುವುದರಿಂದ, ಗಗನಯಾತ್ರಿಗಳು ಮತ್ತು ಭೂ ಸಿಬ್ಬಂದಿಗೆ ಪರಿಪೂರ್ಣ ತರಬೇತಿ ಲಭಿಸುತ್ತದೆ. ಎಲ್ಲಾ ಉಪಕರಣಗಳನ್ನು, ಕಾರ್ಯಾಚರಣೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯ.

ಎಲ್ಲಾ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಕಾರ್ಯಾಚರಿಸುತ್ತಿವೆ ಎಂದು ಖಾತ್ರಿಪಡಿಸಿಕೊಳ್ಳುವುದರಿಂದ ಯೋಜನೆಯ ಯಶಸ್ಸು ಸಾಧಿಸುವ ಸಾಧ್ಯತೆಗಳು ಹೆಚ್ಚಾಗಿ, ಗಗನಯಾನ ಯೋಜನೆಯ ಗುರಿಗಳನ್ನು ಸಾಧಿಸಲು ನೆರವಾಗುತ್ತದೆ.

ಈ ಮಾನವಸಹಿತ ಗಗನಯಾನಕ್ಕೂ ಮುನ್ನ ಮೂರು ಟೆಸ್ಟ್‌ಗಳಿದ್ದು, ಮುಂದಿನ ವರ್ಷ ಮತ್ತೊಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು. ‘ವ್ಯೋಮ ಮಿತ್ರ’ ಹೆಸರಿನ ಮಹಿಳಾ ರೊಬೋಟ್ ಅನ್ನು ಕಳುಹಿಸಲಾಗುವುದು ಎಂದು ಇಸ್ರೋ ಹೇಳಿದೆ. ನಂತರ ಗಗನಯಾನಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಪ್ಲಾನ್ ಮಾಡಿದೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago