BREAKING NEWS

ಚಂದ್ರನ ಮೇಲೆ ಇಳಿಯುವ ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ ವಿಡಿಯೋ ರಿಲೀಸ್ ಮಾಡಿದ ಇಸ್ರೋ

ಬೆಂಗಳೂರು : ತಾಜಾ ಆಗಿ ವಿಕ್ರಮ್ ಸೆರೆ ಹಿಡಿದ ಅದ್ಭುತ ವಿಡಿಯೋ ಇಲ್ಲಿದೆ. ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ್ದ ವಿಡಿಯೋವೊಂದನ್ನು ಇಸ್ರೋ (ISRO) ಇದೀಗತಾನೆ ರಿಲೀಸ್ ಮಾಡಿದೆ. ಲ್ಯಾಂಡರ್ ಕೆಳಗಿಳಿಯುವ ವೇಗಕ್ಕೆ ತಕ್ಕಂತೆ ವಿಡಿಯೋವನ್ನು ಸೆರೆಹಿಡಿದಿದೆ. ಈ ವೇಳೆ ರೋವರ್‌ ಮೇಲ್ಮೈನ ಒಂದು ಭಾಗ ಮತ್ತು ಚಂದ್ರನ ಮೇಲಿರುವ ಗುಳಿಗಳು ಕ್ಯಾಮರಾ ಕಣ್ಣಿಗೆ ಗೋಚರಿಸಿವೆ.

ಚಂದ್ರನ ಮೇಲೆ ಪ್ರಜ್ಞಾನ್ ರೋವರ್ ಓಡಾಟ : ಚಂದ್ರನ ಮೇಲೆ ಚಂದ್ರಯಾನ 3 ಪ್ರಜ್ಞಾನ್ ರೋವರ್‌ನ ರಥಯಾತ್ರೆ ಆರಂಭವಾಗಿದೆ. ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆದ 3 ಗಂಟೆ ಬಳಿಕ ಪ್ರಜ್ಞಾನ್ ರೋವರ್ ಹೊರಬಂದಿದೆ. ಗುರುವಾರ ರಾತ್ರಿಯಿಂದಲೇ ಲ್ಯಾಂಡರ್ ಮತ್ತು ರೋವರ್ ಅಧ್ಯಯನ ಆರಂಭಿಸಿವೆ. 7 ಉಪಕರಣಗಳು, 7 ವಿಷಯಗಳ ಬಗ್ಗೆ ಸಂಶೋಧನೆ ಪ್ರಾರಂಭಿಸಿವೆ.

‘ರೋವರ್‌ನ ಎಲ್ಲಾ ಸಿಸ್ಟಂಗಳು ನಾರ್ಮಲ್’: ಪ್ರಗ್ಯಾನ್ ರೋವರ್‌ಗೆ ಚಕ್ರಗಳನ್ನು ಅಳವಡಿಸಲಾಗಿದ್ದು, ರ‍್ಯಾಂಪ್‌ ಮೂಲಕ ನಿಧಾನವಾಗಿ ರೋವರ್ ಕೆಳಗೆ ಇಳಿದಿದೆ. ಮೊದಲಿಗೆ ರೋವರ್‌ನ ಸೋಲಾರ್ ಫಲಕಗಳು ತೆರೆದುಕೊಂಡಿವೆ. ರೋವರ್ ಕಾರ್ಯಚಟುವಟಿಕೆ ಕುರಿತು ಇಸ್ರೋ ಟ್ವೀಟ್ ಮಾಡಿ ಅಪ್‌ಡೇಟ್ ನೀಡಿದೆ. ಪೂರ್ವನಿಗದಿಯಂತೆ ಎಲ್ಲಾ ಚಟುವಟಿಕೆಗಳು ನಡೆಯುತ್ತಿವೆ. ವಿಕ್ರಮ್ ರೋವರ್‌ನ ಎಲ್ಲಾ ಸಿಸ್ಟಂಗಳು ಯಥಾ ಸ್ಥಿತಿಯಲ್ಲಿವೆ ಅಂತೇಳಿದೆ.

ವಿಕ್ರಂ ಲ್ಯಾಂಡರ್‌ನಿಂದ ಬೇರ್ಪಟ್ಟ ಪ್ರಜ್ಞಾನ್ ರೋವರ್: ಲ್ಯಾಂಡರ್ ಪೇಲೋಡ್ಸ್ ILSA, ರಂಭಾ ಮತ್ತು ಚಸ್ತೆ ಕಾರ್ಯಾರಂಭ ಮಾಡಿವೆ. ರೋವರ್ ಓಡಾಟ ಕೂಡ ಪ್ರಾರಂಭವಾಗಿದೆ. ಪ್ರಪೊಲ್ಷನ್ ಮಾಡ್ಯೂಲ್‌ನ ಶೇಪ್‌ ಪೇಲೋಡ್ ಕಾರ್ಯಾರಂಭ ಮಾಡಿದೆ ಅಂತಾ ಟ್ವೀಟ್ ಮೂಲಕ ಇಸ್ರೋ ಮಾಹಿತಿ ನೀಡಿದೆ. ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಕೆಳಗಿಳಿದು ಸರಾಗವಾಗಿ ಓಡಾಟ ಆರಂಭವಿಸಿದೆ. ಇದು ಖಚಿತವಾಗುತ್ತಿದ್ದಂತೆಯೇ ವಿಕ್ರಂ ಲ್ಯಾಂಡರ್‌ನಿಂದ ಪ್ರಜ್ಞಾನ್ ರೋವರ್ ಅಧಿಕೃತವಾಗಿ ಬೇರ್ಪಡೆಯಾಗಿದೆ.

andolanait

Recent Posts

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

2 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

8 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

3 hours ago