BREAKING NEWS

ಚಂದ್ರನ ಮೇಲೆ ಇಳಿಯುವ ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ ವಿಡಿಯೋ ರಿಲೀಸ್ ಮಾಡಿದ ಇಸ್ರೋ

ಬೆಂಗಳೂರು : ತಾಜಾ ಆಗಿ ವಿಕ್ರಮ್ ಸೆರೆ ಹಿಡಿದ ಅದ್ಭುತ ವಿಡಿಯೋ ಇಲ್ಲಿದೆ. ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ್ದ ವಿಡಿಯೋವೊಂದನ್ನು ಇಸ್ರೋ (ISRO) ಇದೀಗತಾನೆ ರಿಲೀಸ್ ಮಾಡಿದೆ. ಲ್ಯಾಂಡರ್ ಕೆಳಗಿಳಿಯುವ ವೇಗಕ್ಕೆ ತಕ್ಕಂತೆ ವಿಡಿಯೋವನ್ನು ಸೆರೆಹಿಡಿದಿದೆ. ಈ ವೇಳೆ ರೋವರ್‌ ಮೇಲ್ಮೈನ ಒಂದು ಭಾಗ ಮತ್ತು ಚಂದ್ರನ ಮೇಲಿರುವ ಗುಳಿಗಳು ಕ್ಯಾಮರಾ ಕಣ್ಣಿಗೆ ಗೋಚರಿಸಿವೆ.

ಚಂದ್ರನ ಮೇಲೆ ಪ್ರಜ್ಞಾನ್ ರೋವರ್ ಓಡಾಟ : ಚಂದ್ರನ ಮೇಲೆ ಚಂದ್ರಯಾನ 3 ಪ್ರಜ್ಞಾನ್ ರೋವರ್‌ನ ರಥಯಾತ್ರೆ ಆರಂಭವಾಗಿದೆ. ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆದ 3 ಗಂಟೆ ಬಳಿಕ ಪ್ರಜ್ಞಾನ್ ರೋವರ್ ಹೊರಬಂದಿದೆ. ಗುರುವಾರ ರಾತ್ರಿಯಿಂದಲೇ ಲ್ಯಾಂಡರ್ ಮತ್ತು ರೋವರ್ ಅಧ್ಯಯನ ಆರಂಭಿಸಿವೆ. 7 ಉಪಕರಣಗಳು, 7 ವಿಷಯಗಳ ಬಗ್ಗೆ ಸಂಶೋಧನೆ ಪ್ರಾರಂಭಿಸಿವೆ.

‘ರೋವರ್‌ನ ಎಲ್ಲಾ ಸಿಸ್ಟಂಗಳು ನಾರ್ಮಲ್’: ಪ್ರಗ್ಯಾನ್ ರೋವರ್‌ಗೆ ಚಕ್ರಗಳನ್ನು ಅಳವಡಿಸಲಾಗಿದ್ದು, ರ‍್ಯಾಂಪ್‌ ಮೂಲಕ ನಿಧಾನವಾಗಿ ರೋವರ್ ಕೆಳಗೆ ಇಳಿದಿದೆ. ಮೊದಲಿಗೆ ರೋವರ್‌ನ ಸೋಲಾರ್ ಫಲಕಗಳು ತೆರೆದುಕೊಂಡಿವೆ. ರೋವರ್ ಕಾರ್ಯಚಟುವಟಿಕೆ ಕುರಿತು ಇಸ್ರೋ ಟ್ವೀಟ್ ಮಾಡಿ ಅಪ್‌ಡೇಟ್ ನೀಡಿದೆ. ಪೂರ್ವನಿಗದಿಯಂತೆ ಎಲ್ಲಾ ಚಟುವಟಿಕೆಗಳು ನಡೆಯುತ್ತಿವೆ. ವಿಕ್ರಮ್ ರೋವರ್‌ನ ಎಲ್ಲಾ ಸಿಸ್ಟಂಗಳು ಯಥಾ ಸ್ಥಿತಿಯಲ್ಲಿವೆ ಅಂತೇಳಿದೆ.

ವಿಕ್ರಂ ಲ್ಯಾಂಡರ್‌ನಿಂದ ಬೇರ್ಪಟ್ಟ ಪ್ರಜ್ಞಾನ್ ರೋವರ್: ಲ್ಯಾಂಡರ್ ಪೇಲೋಡ್ಸ್ ILSA, ರಂಭಾ ಮತ್ತು ಚಸ್ತೆ ಕಾರ್ಯಾರಂಭ ಮಾಡಿವೆ. ರೋವರ್ ಓಡಾಟ ಕೂಡ ಪ್ರಾರಂಭವಾಗಿದೆ. ಪ್ರಪೊಲ್ಷನ್ ಮಾಡ್ಯೂಲ್‌ನ ಶೇಪ್‌ ಪೇಲೋಡ್ ಕಾರ್ಯಾರಂಭ ಮಾಡಿದೆ ಅಂತಾ ಟ್ವೀಟ್ ಮೂಲಕ ಇಸ್ರೋ ಮಾಹಿತಿ ನೀಡಿದೆ. ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಕೆಳಗಿಳಿದು ಸರಾಗವಾಗಿ ಓಡಾಟ ಆರಂಭವಿಸಿದೆ. ಇದು ಖಚಿತವಾಗುತ್ತಿದ್ದಂತೆಯೇ ವಿಕ್ರಂ ಲ್ಯಾಂಡರ್‌ನಿಂದ ಪ್ರಜ್ಞಾನ್ ರೋವರ್ ಅಧಿಕೃತವಾಗಿ ಬೇರ್ಪಡೆಯಾಗಿದೆ.

andolanait

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

2 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

2 hours ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

2 hours ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

2 hours ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

3 hours ago