BREAKING NEWS

ಚಂದ್ರನ ಮೇಲೆ ಇಳಿಯುವ ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ ವಿಡಿಯೋ ರಿಲೀಸ್ ಮಾಡಿದ ಇಸ್ರೋ

ಬೆಂಗಳೂರು : ತಾಜಾ ಆಗಿ ವಿಕ್ರಮ್ ಸೆರೆ ಹಿಡಿದ ಅದ್ಭುತ ವಿಡಿಯೋ ಇಲ್ಲಿದೆ. ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ್ದ ವಿಡಿಯೋವೊಂದನ್ನು ಇಸ್ರೋ (ISRO) ಇದೀಗತಾನೆ ರಿಲೀಸ್ ಮಾಡಿದೆ. ಲ್ಯಾಂಡರ್ ಕೆಳಗಿಳಿಯುವ ವೇಗಕ್ಕೆ ತಕ್ಕಂತೆ ವಿಡಿಯೋವನ್ನು ಸೆರೆಹಿಡಿದಿದೆ. ಈ ವೇಳೆ ರೋವರ್‌ ಮೇಲ್ಮೈನ ಒಂದು ಭಾಗ ಮತ್ತು ಚಂದ್ರನ ಮೇಲಿರುವ ಗುಳಿಗಳು ಕ್ಯಾಮರಾ ಕಣ್ಣಿಗೆ ಗೋಚರಿಸಿವೆ.

ಚಂದ್ರನ ಮೇಲೆ ಪ್ರಜ್ಞಾನ್ ರೋವರ್ ಓಡಾಟ : ಚಂದ್ರನ ಮೇಲೆ ಚಂದ್ರಯಾನ 3 ಪ್ರಜ್ಞಾನ್ ರೋವರ್‌ನ ರಥಯಾತ್ರೆ ಆರಂಭವಾಗಿದೆ. ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆದ 3 ಗಂಟೆ ಬಳಿಕ ಪ್ರಜ್ಞಾನ್ ರೋವರ್ ಹೊರಬಂದಿದೆ. ಗುರುವಾರ ರಾತ್ರಿಯಿಂದಲೇ ಲ್ಯಾಂಡರ್ ಮತ್ತು ರೋವರ್ ಅಧ್ಯಯನ ಆರಂಭಿಸಿವೆ. 7 ಉಪಕರಣಗಳು, 7 ವಿಷಯಗಳ ಬಗ್ಗೆ ಸಂಶೋಧನೆ ಪ್ರಾರಂಭಿಸಿವೆ.

‘ರೋವರ್‌ನ ಎಲ್ಲಾ ಸಿಸ್ಟಂಗಳು ನಾರ್ಮಲ್’: ಪ್ರಗ್ಯಾನ್ ರೋವರ್‌ಗೆ ಚಕ್ರಗಳನ್ನು ಅಳವಡಿಸಲಾಗಿದ್ದು, ರ‍್ಯಾಂಪ್‌ ಮೂಲಕ ನಿಧಾನವಾಗಿ ರೋವರ್ ಕೆಳಗೆ ಇಳಿದಿದೆ. ಮೊದಲಿಗೆ ರೋವರ್‌ನ ಸೋಲಾರ್ ಫಲಕಗಳು ತೆರೆದುಕೊಂಡಿವೆ. ರೋವರ್ ಕಾರ್ಯಚಟುವಟಿಕೆ ಕುರಿತು ಇಸ್ರೋ ಟ್ವೀಟ್ ಮಾಡಿ ಅಪ್‌ಡೇಟ್ ನೀಡಿದೆ. ಪೂರ್ವನಿಗದಿಯಂತೆ ಎಲ್ಲಾ ಚಟುವಟಿಕೆಗಳು ನಡೆಯುತ್ತಿವೆ. ವಿಕ್ರಮ್ ರೋವರ್‌ನ ಎಲ್ಲಾ ಸಿಸ್ಟಂಗಳು ಯಥಾ ಸ್ಥಿತಿಯಲ್ಲಿವೆ ಅಂತೇಳಿದೆ.

ವಿಕ್ರಂ ಲ್ಯಾಂಡರ್‌ನಿಂದ ಬೇರ್ಪಟ್ಟ ಪ್ರಜ್ಞಾನ್ ರೋವರ್: ಲ್ಯಾಂಡರ್ ಪೇಲೋಡ್ಸ್ ILSA, ರಂಭಾ ಮತ್ತು ಚಸ್ತೆ ಕಾರ್ಯಾರಂಭ ಮಾಡಿವೆ. ರೋವರ್ ಓಡಾಟ ಕೂಡ ಪ್ರಾರಂಭವಾಗಿದೆ. ಪ್ರಪೊಲ್ಷನ್ ಮಾಡ್ಯೂಲ್‌ನ ಶೇಪ್‌ ಪೇಲೋಡ್ ಕಾರ್ಯಾರಂಭ ಮಾಡಿದೆ ಅಂತಾ ಟ್ವೀಟ್ ಮೂಲಕ ಇಸ್ರೋ ಮಾಹಿತಿ ನೀಡಿದೆ. ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಕೆಳಗಿಳಿದು ಸರಾಗವಾಗಿ ಓಡಾಟ ಆರಂಭವಿಸಿದೆ. ಇದು ಖಚಿತವಾಗುತ್ತಿದ್ದಂತೆಯೇ ವಿಕ್ರಂ ಲ್ಯಾಂಡರ್‌ನಿಂದ ಪ್ರಜ್ಞಾನ್ ರೋವರ್ ಅಧಿಕೃತವಾಗಿ ಬೇರ್ಪಡೆಯಾಗಿದೆ.

andolanait

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

1 hour ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

1 hour ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

2 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

11 hours ago