BREAKING NEWS

ಇಸ್ರೋ ಮಹತ್ವದ ಮೈಲುಗಲ್ಲು : ಸೂರ್ಯನ ಅಧ್ಯಯನದ ಆದಿತ್ಯ ಎಲ್‌1 ಉಡಾವಣೆ ಯಶಸ್ವಿ

ಶ್ರೀಹರಿಕೋಟಾ : ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಭಾರತ ಇಂದು ಸಾಕ್ಷಿಯಾಯಿತು.

ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್‌-1 ಮಿಷನ್ ಅನ್ನು ಇಂದು ಸರಿಯಾಗಿ ಬೆಳಗ್ಗೆ 11.50 ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆಯಾಗಿದೆ. ಈ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ ನೇತೃತ್ವದಲ್ಲಿ ವಿಜ್ಞಾನಿಗಳ ತಂಡ ಹಾಜರಿದ್ದರು. ಜೊತೆಗೆ ಆದಿತ್ಯ ಎಲ್‌1 ಉಡಾವಣೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಕೂಡ ಸಾಕ್ಷಿಯಾದರು. ಇಷ್ಟು ಮಾತ್ರವಲ್ಲದೆ ಅಪಾರ ಸಂಖ್ಯೆಯಲ್ಲಿ ಜನಸಾಗರವೇ ನೆರೆದಿತ್ತು.

ಆರಂಭದಲ್ಲಿ ಸೂರ್ಯಯಾನ ಶುರುವಾಗಿದ್ದು, ಕೇವಲ ಸೂರ್ಯನ ಅನ್ನೋ ಹೆಸರಲ್ಲಿ ಮಾತ್ರ. ಆ ಬಳಿಕ ಕೆಲವು ಅಧ್ಯಯನದ ನಂತರ ಎಲ್ 1 ಕಕ್ಷೆ ಹೋಗಲು ವಿಜ್ಞಾನಿಗಳ ತಂಡ ತೀರ್ಮಾನ ಮಾಡಿದ್ದು, ಅದರಂತೆ ಇಂದು ಯಶಸ್ವಿ ಉಡಾವಣೆ ಮಾಡಲಾಗಿದೆ. ಈ ಮೂಲಕ ಪಿಎಸ್‍ಎಲ್‍ವಿ ಸಿ 57 ಹೆಸರಿನ ಎಕ್ಸ್ಟ್ರಾ ಲಾರ್ಜ್ ರಾಕೆಟ್ ಬರೊಬ್ಬರಿ 1450 ಕೆ.ಜಿ ತೂಕವಿದ್ದು, ಒಟ್ಟು ಅಧ್ಯಯನಕ್ಕೆ ಬೇಕಾದ 7 ಉಪಕರಣಗಳನ್ನು ಹೊತ್ತೊಯ್ದಿದೆ.

ಸೌರ ಚಟುವಟಿಕೆ ಮತ್ತು ಬಾಹ್ಯಕಾಶ ವಾತವರಣದ ಮೇಲಿನ ಪರಿಣಾಮವನ್ನು ಅಧ್ಯಯನ ಮಾಡುವುದು ಈ ಅಧ್ಯಯನದ ಪ್ರಮುಖ ಅಂಶವಾಗಿದೆ. ಉಡಾವಣೆ ಬಳಿಕ ನಿರ್ದಿಷ್ಟ ಸ್ಥಳವಾದ ಎಲ್ 1 ಪಾಯಿಂಟ್ ತಲುಪಲು ಬರೊಬ್ಬರಿ 120 ದಿನಗಳನ್ನು ತೆಗೆದುಕೊಳ್ಳಲಿದೆ. ಕಕ್ಷೆಯನ್ನು ತಲುಪಿದ ಬಳಿಕ ರಾಕೆಟ್ ಹೊತ್ತೊಯ್ಯುವ 8 ಉಪಕರಣಗಳ ಸ್ವಿಚ್ ಪ್ರೋಗ್ರಾಂಮಿಂಗ್ ಮೂಲಕ ತಮ್ಮ ಕಾರ್ಯವನ್ನು ಆರಂಭಿಸಲಿವೆ. ಮುಖ್ಯವಾಗಿ ಎಲ್ 1 ಕಕ್ಷೆಯಲ್ಲೇ ಈ ಎಲ್ಲಾ ಕಾರ್ಯಗಳು ಸರಾಗವಾಗಿ ಆಗಲು ಸಾಧ್ಯ. ಆ ಕಾರಣಕ್ಕೆ ಸದ್ಯ ಇಸ್ರೋ ಕೂಡ ಇದೇ ಪಾಯಿಂಟ್ ಆಯ್ಕೆ ಮಾಡಿದೆ.

ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಈ ಕಕ್ಷೆಯಲ್ಲಿ, ಭೂಮಿ ಮತ್ತು ಸೂರ್ಯನ ಗುರುತ್ವಾಕರ್ಷಣೆಯ ಸಮನಾಗಿರುತ್ತದೆ. ಇಲ್ಲಿ ಯಾವುದೇ ಉಪಗ್ರಹ ನಿಯೋಜಿಸಿದರು ಯಾವುದೇ ಅಡ್ಡಿ ಆತಂಕ ಇರೋದಿಲ್ಲ. ಜೊತೆಗೆ ಗ್ರಹಣದಂತ ಅಡ್ಡಿ ಆತಂಕ ಇಲ್ಲದೆ ಅಧ್ಯಯನ ಸರಾಗವಾಗಿ ಸಾಗುವ ಮೂಲಕ ಹೆಚ್ಚು ಇಂಧನ ವ್ಯರ್ಥವಾಗದ ಕಾರಣ ಈ ಜಾಗ ಅಧ್ಯಯನಕ್ಕೆ ಸೂಕ್ತವಾಗಿದ್ದು, ಬರೊಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಕಕ್ಷೆಯಲ್ಲಿ ಅಧ್ಯಯನ ನಡೆಸಲಿದೆ.

lokesh

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

3 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

3 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

3 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

3 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

3 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

3 hours ago