BREAKING NEWS

ಇಸ್ರೋ ಮಹತ್ವದ ಮೈಲುಗಲ್ಲು : ಸೂರ್ಯನ ಅಧ್ಯಯನದ ಆದಿತ್ಯ ಎಲ್‌1 ಉಡಾವಣೆ ಯಶಸ್ವಿ

ಶ್ರೀಹರಿಕೋಟಾ : ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಭಾರತ ಇಂದು ಸಾಕ್ಷಿಯಾಯಿತು.

ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್‌-1 ಮಿಷನ್ ಅನ್ನು ಇಂದು ಸರಿಯಾಗಿ ಬೆಳಗ್ಗೆ 11.50 ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆಯಾಗಿದೆ. ಈ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ ನೇತೃತ್ವದಲ್ಲಿ ವಿಜ್ಞಾನಿಗಳ ತಂಡ ಹಾಜರಿದ್ದರು. ಜೊತೆಗೆ ಆದಿತ್ಯ ಎಲ್‌1 ಉಡಾವಣೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಕೂಡ ಸಾಕ್ಷಿಯಾದರು. ಇಷ್ಟು ಮಾತ್ರವಲ್ಲದೆ ಅಪಾರ ಸಂಖ್ಯೆಯಲ್ಲಿ ಜನಸಾಗರವೇ ನೆರೆದಿತ್ತು.

ಆರಂಭದಲ್ಲಿ ಸೂರ್ಯಯಾನ ಶುರುವಾಗಿದ್ದು, ಕೇವಲ ಸೂರ್ಯನ ಅನ್ನೋ ಹೆಸರಲ್ಲಿ ಮಾತ್ರ. ಆ ಬಳಿಕ ಕೆಲವು ಅಧ್ಯಯನದ ನಂತರ ಎಲ್ 1 ಕಕ್ಷೆ ಹೋಗಲು ವಿಜ್ಞಾನಿಗಳ ತಂಡ ತೀರ್ಮಾನ ಮಾಡಿದ್ದು, ಅದರಂತೆ ಇಂದು ಯಶಸ್ವಿ ಉಡಾವಣೆ ಮಾಡಲಾಗಿದೆ. ಈ ಮೂಲಕ ಪಿಎಸ್‍ಎಲ್‍ವಿ ಸಿ 57 ಹೆಸರಿನ ಎಕ್ಸ್ಟ್ರಾ ಲಾರ್ಜ್ ರಾಕೆಟ್ ಬರೊಬ್ಬರಿ 1450 ಕೆ.ಜಿ ತೂಕವಿದ್ದು, ಒಟ್ಟು ಅಧ್ಯಯನಕ್ಕೆ ಬೇಕಾದ 7 ಉಪಕರಣಗಳನ್ನು ಹೊತ್ತೊಯ್ದಿದೆ.

ಸೌರ ಚಟುವಟಿಕೆ ಮತ್ತು ಬಾಹ್ಯಕಾಶ ವಾತವರಣದ ಮೇಲಿನ ಪರಿಣಾಮವನ್ನು ಅಧ್ಯಯನ ಮಾಡುವುದು ಈ ಅಧ್ಯಯನದ ಪ್ರಮುಖ ಅಂಶವಾಗಿದೆ. ಉಡಾವಣೆ ಬಳಿಕ ನಿರ್ದಿಷ್ಟ ಸ್ಥಳವಾದ ಎಲ್ 1 ಪಾಯಿಂಟ್ ತಲುಪಲು ಬರೊಬ್ಬರಿ 120 ದಿನಗಳನ್ನು ತೆಗೆದುಕೊಳ್ಳಲಿದೆ. ಕಕ್ಷೆಯನ್ನು ತಲುಪಿದ ಬಳಿಕ ರಾಕೆಟ್ ಹೊತ್ತೊಯ್ಯುವ 8 ಉಪಕರಣಗಳ ಸ್ವಿಚ್ ಪ್ರೋಗ್ರಾಂಮಿಂಗ್ ಮೂಲಕ ತಮ್ಮ ಕಾರ್ಯವನ್ನು ಆರಂಭಿಸಲಿವೆ. ಮುಖ್ಯವಾಗಿ ಎಲ್ 1 ಕಕ್ಷೆಯಲ್ಲೇ ಈ ಎಲ್ಲಾ ಕಾರ್ಯಗಳು ಸರಾಗವಾಗಿ ಆಗಲು ಸಾಧ್ಯ. ಆ ಕಾರಣಕ್ಕೆ ಸದ್ಯ ಇಸ್ರೋ ಕೂಡ ಇದೇ ಪಾಯಿಂಟ್ ಆಯ್ಕೆ ಮಾಡಿದೆ.

ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಈ ಕಕ್ಷೆಯಲ್ಲಿ, ಭೂಮಿ ಮತ್ತು ಸೂರ್ಯನ ಗುರುತ್ವಾಕರ್ಷಣೆಯ ಸಮನಾಗಿರುತ್ತದೆ. ಇಲ್ಲಿ ಯಾವುದೇ ಉಪಗ್ರಹ ನಿಯೋಜಿಸಿದರು ಯಾವುದೇ ಅಡ್ಡಿ ಆತಂಕ ಇರೋದಿಲ್ಲ. ಜೊತೆಗೆ ಗ್ರಹಣದಂತ ಅಡ್ಡಿ ಆತಂಕ ಇಲ್ಲದೆ ಅಧ್ಯಯನ ಸರಾಗವಾಗಿ ಸಾಗುವ ಮೂಲಕ ಹೆಚ್ಚು ಇಂಧನ ವ್ಯರ್ಥವಾಗದ ಕಾರಣ ಈ ಜಾಗ ಅಧ್ಯಯನಕ್ಕೆ ಸೂಕ್ತವಾಗಿದ್ದು, ಬರೊಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಕಕ್ಷೆಯಲ್ಲಿ ಅಧ್ಯಯನ ನಡೆಸಲಿದೆ.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

9 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

11 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago