ನವದೆಹಲಿ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್ಡೌನ್ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.
ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್ಡೌನ್ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು.
ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್ಗಳ ಕೌಂಟ್ಡೌನ್ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಆಕೆಯ ಅಂತಿಮ ಕೌಂಟ್ಡೌನ್ ಘೋಷಣೆಯಾಗಿತ್ತು. ಅವರು ಅನಿರೀಕ್ಷಿತವಾಗಿ ನಿಧನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಲರ್ಮತಿ ಆರ್ಐಎಸ್ಎಟಿ-1ರ ಪಾಜೆಕ್ಟ್ ಡೈರೆಕ್ಟರ್ ಆಗಿದ್ದು, 2015ರಲ್ಲಿ ಸರ್ಕಾರ ನೀಡಿದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು. ವಲರ್ಮತಿ 1984ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2ಎ, ಐಆರ್ಎಸ್, ಐಸಿ, ಐಡಿ, ಟಿಇಎಸ್ ಸೇರಿದಂತೆ ಹಲವು ಕಾರ್ಯಾಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…