ನವದೆಹಲಿ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್ಡೌನ್ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.
ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್ಡೌನ್ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು.
ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್ಗಳ ಕೌಂಟ್ಡೌನ್ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಆಕೆಯ ಅಂತಿಮ ಕೌಂಟ್ಡೌನ್ ಘೋಷಣೆಯಾಗಿತ್ತು. ಅವರು ಅನಿರೀಕ್ಷಿತವಾಗಿ ನಿಧನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಲರ್ಮತಿ ಆರ್ಐಎಸ್ಎಟಿ-1ರ ಪಾಜೆಕ್ಟ್ ಡೈರೆಕ್ಟರ್ ಆಗಿದ್ದು, 2015ರಲ್ಲಿ ಸರ್ಕಾರ ನೀಡಿದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು. ವಲರ್ಮತಿ 1984ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2ಎ, ಐಆರ್ಎಸ್, ಐಸಿ, ಐಡಿ, ಟಿಇಎಸ್ ಸೇರಿದಂತೆ ಹಲವು ಕಾರ್ಯಾಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…