BREAKING NEWS

ಹೃದಯಾಘಾತದಿಂದ ಇಸ್ರೋ ವಿಜ್ಞಾನಿ ವಲರ್ಮತಿ ನಿಧನ

ನವದೆಹಲಿ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.

ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು.

ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಆಕೆಯ ಅಂತಿಮ ಕೌಂಟ್‌ಡೌನ್ ಘೋಷಣೆಯಾಗಿತ್ತು. ಅವರು ಅನಿರೀಕ್ಷಿತವಾಗಿ ನಿಧನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಲರ್ಮತಿ ಆರ್‌ಐಎಸ್‌ಎಟಿ-1ರ ಪಾಜೆಕ್ಟ್ ಡೈರೆಕ್ಟರ್ ಆಗಿದ್ದು, 2015ರಲ್ಲಿ ಸರ್ಕಾರ ನೀಡಿದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು. ವಲರ್ಮತಿ 1984ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2ಎ, ಐಆರ್‌ಎಸ್, ಐಸಿ, ಐಡಿ, ಟಿಇಎಸ್ ಸೇರಿದಂತೆ ಹಲವು ಕಾರ್ಯಾಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

23 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago