BREAKING NEWS

ಆಗಸ್ಟ್ 23 ಸಂಜೆ 6:04 ಕ್ಕೆ ಚಂದ್ರನ ಮೇಲೆ ಇಳಿಯಲಿದೆ ಇಸ್ರೋ ನೌಕೆ

ಶ್ರೀಹರಿಕೋಟಾ : ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ ಇಂದು ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.

ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ದಕ್ಷಿಣ ದ್ರುವದಲ್ಲಿ ಲ್ಯಾಂಡ್‌ ಆಗಬೇಕಿದೆ. ಇದಕ್ಕೆ ಇದೀಗ ಇಸ್ರೋ ಮುಹೂರ್ತ ನಿಗದಿಪಡಿಸಿದ್ದು, ಆಗಸ್ಟ್ 23 ಬುಧವಾರ ಸಂಜೆ 6:04 ಕ್ಕೆ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.

ಪ್ರಸ್ತುತ ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.

ಎರಡನೇ ಮತ್ತು ಅಂತಿಮ ಡಿ–ಬೂಸ್ಟಿಂಗ್ ಕಾರ್ಯಾಚರಣೆಯು ಚಂದ್ರನ ಕಕ್ಷೆಯನ್ನು 25 km x 134 km ನಷ್ಟು ಸನಿಹಕ್ಕೆ ತಲುಪಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ನಿರ್ದಿಷ್ಟಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆಯು ಆಗಸ್ಟ್ 23, 2023 ರಂದು ಬೆಳಿಗ್ಗೆ ಸ್ಥಳೀಯ ಕಾಲಮಾನ 17.45 ಗಂಟೆಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಲ್ಯಾಂಡರ್ ವಿಕ್ರಮ್ ಸ್ವಯಂಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಯಲ್ಲಿ ಇಳಿಯುತ್ತಿದೆ; ಹೇಗೆ ಹೋಗಬೇಕೆಂದು ಅದು ತಾನಾಗಿಯೇ ನಿರ್ಧರಿಸುತ್ತದೆ ಎಂದು ಇಸ್ರೊ ಟ್ವಿಟರ್ ನಲ್ಲಿ ತಿಳಿಸಿದೆ.

25 ಕಿಲೋ ಮೀಟರ್ x 134 ಕಿಲೋ ಮೀಟರ್ ಕಕ್ಷೆ ಚಂದ್ರನ ಸಮೀಪದ ಕಕ್ಷೆಯಾಗಿದ್ದು ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಆಗಸ್ಟ್ 23ರಂದು ನಡೆಯಲಿದೆ. ಹೀಗಾಗಿ ಇಡೀ ಜಗತ್ತು ಭಾರತದ ಕಡೆ ಕಣ್ಣಿಟ್ಟು ಕಾಯುತ್ತಿದೆ.

ಈ ಬಾರಿ ಇಸ್ರೋ ಅಂತ್ಯಾಧುನಿಕ ತಂತ್ರಜ್ಞಾನ ಬಳಸಿ ಚಂದ್ರನ ಯೋಜನೆಗೆ ಸಿದ್ಧತೆ ನಡೆಸಿತ್ತು. ಹೀಗಾಗಿ ಚಂದ್ರಯಾನ-3 ಲ್ಯಾಂಡರ್ ಹೈಫೈ ಆಗಿದೆ. ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ ಕೂಡ ಅತ್ಯಾಧುನಿಕ ತಂತ್ರಜ್ಞಾನವೇ ಆಗಿದೆ. ಇದು ವಿಕ್ರಮ್ ಲ್ಯಾಂಡರ್ ತನಗಾಗಿ ಸರಿಯಾದ ಮತ್ತು ಸಮತಟ್ಟು ಲ್ಯಾಂಡಿಂಗ್ ಸ್ಥಳ ಹುಡುಕಲು ಸಹಾಯ ಮಾಡುತ್ತದೆ. ಕ್ಯಾಮೆರಾದ ಸಹಾಯದಿಂದ ವಿಕ್ರಮ್ ಲ್ಯಾಂಡರ್ ಎಲ್ಲಿ ಇಳಿಯುತ್ತಿದೆ? ಹೇಗೆ ಇಳಿಯುತ್ತಿದೆ? ಎಂಬುದನ್ನು ನೋಡಬಹುದು.

lokesh

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

1 hour ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

1 hour ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

2 hours ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

3 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

3 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

3 hours ago