BREAKING NEWS

ಆಗಸ್ಟ್ 23 ಸಂಜೆ 6:04 ಕ್ಕೆ ಚಂದ್ರನ ಮೇಲೆ ಇಳಿಯಲಿದೆ ಇಸ್ರೋ ನೌಕೆ

ಶ್ರೀಹರಿಕೋಟಾ : ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ ಇಂದು ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.

ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ದಕ್ಷಿಣ ದ್ರುವದಲ್ಲಿ ಲ್ಯಾಂಡ್‌ ಆಗಬೇಕಿದೆ. ಇದಕ್ಕೆ ಇದೀಗ ಇಸ್ರೋ ಮುಹೂರ್ತ ನಿಗದಿಪಡಿಸಿದ್ದು, ಆಗಸ್ಟ್ 23 ಬುಧವಾರ ಸಂಜೆ 6:04 ಕ್ಕೆ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.

ಪ್ರಸ್ತುತ ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.

ಎರಡನೇ ಮತ್ತು ಅಂತಿಮ ಡಿ–ಬೂಸ್ಟಿಂಗ್ ಕಾರ್ಯಾಚರಣೆಯು ಚಂದ್ರನ ಕಕ್ಷೆಯನ್ನು 25 km x 134 km ನಷ್ಟು ಸನಿಹಕ್ಕೆ ತಲುಪಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ನಿರ್ದಿಷ್ಟಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆಯು ಆಗಸ್ಟ್ 23, 2023 ರಂದು ಬೆಳಿಗ್ಗೆ ಸ್ಥಳೀಯ ಕಾಲಮಾನ 17.45 ಗಂಟೆಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಲ್ಯಾಂಡರ್ ವಿಕ್ರಮ್ ಸ್ವಯಂಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಯಲ್ಲಿ ಇಳಿಯುತ್ತಿದೆ; ಹೇಗೆ ಹೋಗಬೇಕೆಂದು ಅದು ತಾನಾಗಿಯೇ ನಿರ್ಧರಿಸುತ್ತದೆ ಎಂದು ಇಸ್ರೊ ಟ್ವಿಟರ್ ನಲ್ಲಿ ತಿಳಿಸಿದೆ.

25 ಕಿಲೋ ಮೀಟರ್ x 134 ಕಿಲೋ ಮೀಟರ್ ಕಕ್ಷೆ ಚಂದ್ರನ ಸಮೀಪದ ಕಕ್ಷೆಯಾಗಿದ್ದು ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಆಗಸ್ಟ್ 23ರಂದು ನಡೆಯಲಿದೆ. ಹೀಗಾಗಿ ಇಡೀ ಜಗತ್ತು ಭಾರತದ ಕಡೆ ಕಣ್ಣಿಟ್ಟು ಕಾಯುತ್ತಿದೆ.

ಈ ಬಾರಿ ಇಸ್ರೋ ಅಂತ್ಯಾಧುನಿಕ ತಂತ್ರಜ್ಞಾನ ಬಳಸಿ ಚಂದ್ರನ ಯೋಜನೆಗೆ ಸಿದ್ಧತೆ ನಡೆಸಿತ್ತು. ಹೀಗಾಗಿ ಚಂದ್ರಯಾನ-3 ಲ್ಯಾಂಡರ್ ಹೈಫೈ ಆಗಿದೆ. ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ ಕೂಡ ಅತ್ಯಾಧುನಿಕ ತಂತ್ರಜ್ಞಾನವೇ ಆಗಿದೆ. ಇದು ವಿಕ್ರಮ್ ಲ್ಯಾಂಡರ್ ತನಗಾಗಿ ಸರಿಯಾದ ಮತ್ತು ಸಮತಟ್ಟು ಲ್ಯಾಂಡಿಂಗ್ ಸ್ಥಳ ಹುಡುಕಲು ಸಹಾಯ ಮಾಡುತ್ತದೆ. ಕ್ಯಾಮೆರಾದ ಸಹಾಯದಿಂದ ವಿಕ್ರಮ್ ಲ್ಯಾಂಡರ್ ಎಲ್ಲಿ ಇಳಿಯುತ್ತಿದೆ? ಹೇಗೆ ಇಳಿಯುತ್ತಿದೆ? ಎಂಬುದನ್ನು ನೋಡಬಹುದು.

lokesh

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago