BREAKING NEWS

ಇಸ್ರೋ ಮತ್ತೊಂದು ಸಾಧನೆ: ಗಮ್ಯಸ್ಥಾನ ತಲುಪಿದ ಆದಿತ್ಯ – ಎಲ್‌ 1

ಕಳೆದ ವರ್ಷ ಯಶಸ್ವಿಯಾಗಿ ಚಂದ್ರಯಾನ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸದ್ಯ ಆದಿತ್ಯ ಎಲ್‌1 ಬಾಹ್ಯ ನೌಕೆಯನ್ನು ಉಡಾವಣೆ ಮಾಡಿ ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿತ್ತು.

ಶ್ರೀಹರಿಕೋಟಾದಿಂದ ಉಡಾವಣೆಯಾಗಿದ್ದ ಆದಿತ್ಯ – ಎಲ್‌ 1 ನಾಲ್ಕು ತಿಂಗಳ ಬಳಿಕ ಇಂದು ( ಜನವರಿ 6 ) ಯಶಸ್ವಿಯಾಗಿ ಅಂತಿಮ ಕಕ್ಷೆಯನ್ನು ತಲುಪಿದೆ. ಆದಿತ್ಯ ಎಲ್‌ 1 ಗಮ್ಯಸ್ಥಾನ ತಲುಪುತ್ತಿದ್ದಂತೆಯೇ ಇಸ್ರೋ ಟ್ವೀಟ್‌ ಮಾಡಿದ್ದು “ಭಾರತ, ನಾನು ತಲುಪಿದೆ. ನಾನು ನನ್ನ ಗಮ್ಯಸ್ಥಾನವನ್ನು ತಲುಪಿದೆ” ಎಂದು ಬರೆದುಕೊಂಡಿದೆ. ಆದಿತ್ಯ ಎಲ್‌ 1 ಯಶಸ್ವಿಯಾಗಿ ಎಲ್‌ 1 ಬಿಂದುವಿನ ಹಾಲೋ ಕಕ್ಷೆಯನ್ನು ತಲುಪಿದೆ ಎಂದು ಉಲ್ಲೇಖಿಸಿದೆ.

ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಇನ್ನೂ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಟ್ವೀಟ್‌ ಮಾಡಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ್ದು, ಇಸ್ರೋಗೆ ಶುಭ ಕೋರಿದ್ದಾರೆ.

andolana

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

2 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

2 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

2 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

3 hours ago