ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ.
ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ.
ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…