ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.
ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಅಕ್ಟೋಬರ್ 6 ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬಂದಿದ್ದ ತಂಡ ಬೆಂಗಳೂರಿನ ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ದಾಳಿ ನಡೆಸಿತ್ತು.
ಇನ್ನು ತೆರಿಗೆ ವಂಚನೆ ಆರೋಪಡಿ ಮೊನ್ನೇ ಅಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಬಿರಿಯಾನಿ ಸೆಂಟರ್ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿದ್ದರು. ಅಲ್ಲದೇ .ಮಾಲೀಕರ ಮನೆಯಿಂದ 1.47 ಕೋಟಿ ರೂಪಾಯಿ ನಗದು ಸಿಕ್ಕಿತ್ತು.
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…