ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.
ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಅಕ್ಟೋಬರ್ 6 ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬಂದಿದ್ದ ತಂಡ ಬೆಂಗಳೂರಿನ ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ದಾಳಿ ನಡೆಸಿತ್ತು.
ಇನ್ನು ತೆರಿಗೆ ವಂಚನೆ ಆರೋಪಡಿ ಮೊನ್ನೇ ಅಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಬಿರಿಯಾನಿ ಸೆಂಟರ್ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿದ್ದರು. ಅಲ್ಲದೇ .ಮಾಲೀಕರ ಮನೆಯಿಂದ 1.47 ಕೋಟಿ ರೂಪಾಯಿ ನಗದು ಸಿಕ್ಕಿತ್ತು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…