ಬೆಳಗಾವಿ : ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ತಮ್ಮ ಮೇಲೆ ಲೋಕಾಯುಕ್ತ ಮತ್ತು ಐಟಿ ದಾಳಿ ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ 10 ದಿನ ಉಳಿದಿದೆ. ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ ಪರವಾದ ವಾತಾವರಣ ಇದೆ. ರಾಜ್ಯದ ಮತದಾರರು ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜನ ಭರವಸೆ ಇಟ್ಟಿದ್ದಾರೆ. ಬಿಜೆಪಿ ಹತಾಶೆಯಿಂದ ವಾಮಮಾರ್ಗ ಹಿಡಿಯುವಂತ ಸುದ್ದಿ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.
ಅಭ್ಯರ್ಥಿಗಳು ಮತ್ತು ಅವರ ಸಂಬಂಧಿಕರ ಮೇಲೆ 50 ಜನರ ಮೇಲೆ ಲೋಕಾಯುಕ್ತ, ಐಟಿ ದಾಳಿ ಸಂಬಂಧ ಇದೆ. ಇದರಿಂದಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಒಂದು, ಎರಡು ದಿನದಲ್ಲಿ ದಾಳಿಯ ಮೂನ್ಸುಚನೆ ಸಿಕ್ಕಿದೆ ಎಂದು ಸ್ಫೋಟಕ ವಿಷಯವನ್ನು ತಿಳಿಸಿದರು.
ವಾಮಮಾರ್ಗ ಕೈ ಬಿಟ್ಟು ಸತ್ಯ, ಧರ್ಮದ ಮೇಲೆ ಚುನಾವಣೆ ಆಗಬೇಕು. ರಾಜ್ಯದ ಕಾಂಗ್ರೆಸ್ ಪಕ್ಷದ ವಕ್ತಾರೆಯಾಗಿ ಸುದ್ದಿಗೋಷ್ಠಿ ಮಾಡುತ್ತಿದ್ದೇನೆ. 50 ಜನರಲ್ಲಿ ನನ್ನ ಹೆಸರು ಸಹ ಇದೆ ಎಂದು ಮಾಹಿತಿ ಇದೆ ಎಂದರು.
ನಮ್ಮ ಜಿಲ್ಲೆಯಲ್ಲಿ ಮೂರು ಜನರನ್ನು ಟಾರ್ಗೆಟ್ ಮಾಡಿದ್ದಾರೆ. 50 ಜನರಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಜನರ ಭಾವನೆ ಕದಡಲು ಈ ರೀತಿಯ ಪ್ರಯತ್ನಿಸಲಾಗುತ್ತಿದೆ. 1 ಸಾವಿರ ಆದಾಯ ತೆರಿಗೆ ಅಧಿಕಾರಿಗಳು ಬಂದಿರುವ ಮಾಹಿತಿಯಿದೆ ಎಂದಿದ್ದಾರೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…