BREAKING NEWS

ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್ – ಜೆಡಿಎಸ್ ನಾಯಕರುಗಳ ಮೇಲೆ ಐಟಿ ದಾಳಿ : ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ತಮ್ಮ ಮೇಲೆ ಲೋಕಾಯುಕ್ತ ಮತ್ತು ಐಟಿ ದಾಳಿ ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ 10 ದಿನ ಉಳಿದಿದೆ. ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ ಪರವಾದ ವಾತಾವರಣ ಇದೆ. ರಾಜ್ಯದ ಮತದಾರರು ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜನ ಭರವಸೆ ಇಟ್ಟಿದ್ದಾರೆ. ಬಿಜೆಪಿ ಹತಾಶೆಯಿಂದ ವಾಮಮಾರ್ಗ ಹಿಡಿಯುವಂತ ಸುದ್ದಿ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.

ಅಭ್ಯರ್ಥಿಗಳು ಮತ್ತು ಅವರ ಸಂಬಂಧಿಕರ ಮೇಲೆ 50 ಜನರ ಮೇಲೆ ಲೋಕಾಯುಕ್ತ, ಐಟಿ ದಾಳಿ ಸಂಬಂಧ ಇದೆ. ಇದರಿಂದಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಒಂದು, ಎರಡು ದಿನದಲ್ಲಿ ದಾಳಿಯ ಮೂನ್ಸುಚನೆ ಸಿಕ್ಕಿದೆ ಎಂದು ಸ್ಫೋಟಕ ವಿಷಯವನ್ನು ತಿಳಿಸಿದರು.

ವಾಮಮಾರ್ಗ ಕೈ ಬಿಟ್ಟು ಸತ್ಯ, ಧರ್ಮದ ಮೇಲೆ ಚುನಾವಣೆ ಆಗಬೇಕು. ರಾಜ್ಯದ ಕಾಂಗ್ರೆಸ್ ಪಕ್ಷದ ವಕ್ತಾರೆಯಾಗಿ ಸುದ್ದಿಗೋಷ್ಠಿ ಮಾಡುತ್ತಿದ್ದೇನೆ. 50 ಜನರಲ್ಲಿ ನನ್ನ ಹೆಸರು ಸಹ ಇದೆ ಎಂದು ಮಾಹಿತಿ ಇದೆ ಎಂದರು.

ನಮ್ಮ ಜಿಲ್ಲೆಯಲ್ಲಿ‌‌ ಮೂರು ಜನರನ್ನು ‌ಟಾರ್ಗೆಟ್ ಮಾಡಿದ್ದಾರೆ. 50 ಜನರಲ್ಲಿ ಕಾಂಗ್ರೆಸ್, ‌ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಜನರ ಭಾವನೆ ಕದಡಲು ಈ ರೀತಿಯ ಪ್ರಯತ್ನಿಸಲಾಗುತ್ತಿದೆ. 1 ಸಾವಿರ ಆದಾಯ ತೆರಿಗೆ ಅಧಿಕಾರಿಗಳು ಬಂದಿರುವ ಮಾಹಿತಿಯಿದೆ ಎಂದಿದ್ದಾರೆ.

lokesh

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

9 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

12 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

12 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

12 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

15 hours ago