ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ ವಾಹನದಲ್ಲೇ ಹಣ ಸಾಗಿಸಬಹುದು’ ಎಂದು ಅವರು ಹೇಳಿದರು.‘ಕಳೆದ ಚುನಾವಣೆ ವೇಳೆ ಯಾರ ಮೇಲೆ ಐಟಿ, ಇಡಿ ದಾಳಿ ನಡೆದಿದೆ ಎನ್ನುವುದನ್ನು ನೋಡಿದ್ದೇವೆ. ಐಟಿ, ಇ.ಡಿ ದಾಳಿ ಕೇವಲ ಕಾಂಗ್ರೆಸ್, ಜೆಡಿಎಸ್ ನಾಯಕರ ಮೇಲೆ ಮಾತ್ರ ನಡೆಯುತ್ತದೆ’ ಎಂದು ದೂರಿದ ಅವರು, ‘ಬಿಜೆಪಿ ಅಭ್ಯರ್ಥಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ಎಲ್ಲೂ ಕಾಣಿಸಲೇ ಇಲ್ಲ’ ಎಂದರು ‘ಐಟಿ, ಇ.ಡಿ ಬಿಜೆಪಿ ಪ್ರೈವೇಟ್ ಡಿಪಾರ್ಟ್ಮೆಂಟ್ ಆಗಿದೆ. ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ಅಭ್ಯರ್ಥಿಗಳ ಮೇಲೆ ದಾಳಿ ನಡೆಸಿ ಕೆಟ್ಟ ಹೆಸರು ಬರುವಂತೆ ಬಿಜೆಪಿಯವರು ಮಾಡುತ್ತಾರೆ. ಆ ಮೂಲಕ, ಅಭ್ಯರ್ಥಿಗಳನ್ನು ಮಾನಸಿಕವಾಗಿ ಕುಗ್ಗು ವಂತೆ ಮಾಡುತ್ತಾರೆ’ ಎಂದೂ ಹೇಳಿದರು.
ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…