ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ ವಾಹನದಲ್ಲೇ ಹಣ ಸಾಗಿಸಬಹುದು’ ಎಂದು ಅವರು ಹೇಳಿದರು.‘ಕಳೆದ ಚುನಾವಣೆ ವೇಳೆ ಯಾರ ಮೇಲೆ ಐಟಿ, ಇಡಿ ದಾಳಿ ನಡೆದಿದೆ ಎನ್ನುವುದನ್ನು ನೋಡಿದ್ದೇವೆ. ಐಟಿ, ಇ.ಡಿ ದಾಳಿ ಕೇವಲ ಕಾಂಗ್ರೆಸ್, ಜೆಡಿಎಸ್ ನಾಯಕರ ಮೇಲೆ ಮಾತ್ರ ನಡೆಯುತ್ತದೆ’ ಎಂದು ದೂರಿದ ಅವರು, ‘ಬಿಜೆಪಿ ಅಭ್ಯರ್ಥಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ಎಲ್ಲೂ ಕಾಣಿಸಲೇ ಇಲ್ಲ’ ಎಂದರು ‘ಐಟಿ, ಇ.ಡಿ ಬಿಜೆಪಿ ಪ್ರೈವೇಟ್ ಡಿಪಾರ್ಟ್ಮೆಂಟ್ ಆಗಿದೆ. ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ಅಭ್ಯರ್ಥಿಗಳ ಮೇಲೆ ದಾಳಿ ನಡೆಸಿ ಕೆಟ್ಟ ಹೆಸರು ಬರುವಂತೆ ಬಿಜೆಪಿಯವರು ಮಾಡುತ್ತಾರೆ. ಆ ಮೂಲಕ, ಅಭ್ಯರ್ಥಿಗಳನ್ನು ಮಾನಸಿಕವಾಗಿ ಕುಗ್ಗು ವಂತೆ ಮಾಡುತ್ತಾರೆ’ ಎಂದೂ ಹೇಳಿದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…