BREAKING NEWS

ಮತದಾರರಿಗೆ ಆಮಿಷವೊಡ್ಡುವವರ ಮೇಲೆ ಐಟಿ ಕಣ್ಣು

ಬೆಂಗಳೂರು:ಮತದಾರರ ಮೇಲೆ ಚುನಾವಣಾ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಆಸೆ, ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್)ತೆರೆದಿದ್ದಾರೆ.
ಪ್ರಾಯಶಃ ಇದೇ ಮೊದಲ ಬಾರಿಗೆ ಐಟಿ ಅಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಂಟ್ರೋಲ್ ರೂಮ್ ಪ್ರಾರಂಭಿಸಿದ್ದು, ಮೊಬೈಲ್, ದೂರವಾಣಿ ಸಂಖ್ಯೆ ಹಾಗೂ ಟೋಲ್ ಫ್ರೀ ಸಂಖ್ಯೆಯನ್ನು ಪ್ರಾರಂಭಿಸಿದೆ.
ದಿನದ 24 ಗಂಟೆಯೂ ಇದು ಕಾರ್ಯ ನಿರ್ವಹಿಸಲಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ನೇತಾರರು ಬಂಗಾರ, ಮದ್ಯ, ನಗದು ಸೇರಿದಂತೆ ಯಾವುದೇ ರೀತಿಯಲ್ಲೂ ಆಮಿಷವೊಡ್ಡಿದರೆ ದೂರು ನೀಡಬೇಕೆಂದು ಆದಾಯ ತೆರಿಗೆ ಇಲಾಖೆ ಅಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ದೂರು ನೀಡುವವರ ಹೆಸರುಗಳನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಸ್ಪಷ್ಟಪಡಿಸಿರುವ ಐಟಿ, ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಚುನಾವಣೆ ನಡೆಯಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಮನವಿ ಮಾಡಿದೆ.
ದೂರು ಕೊಡುವವರು ಟೋಲ್ ಫ್ರೀ ಸಂಖ್ಯೆ 1800-425-2115 ಅದೇ ರೀತಿ ದೂರವಾಣಿ ಸಂಖ್ಯೆ 080-22861126 ಜೊತೆಗೆ ಮೊಬೈಲ್ ಸಂಖ್ಯೆ 8277422825 ಹಾಗೂ 8277413614 ಸಂಪರ್ಕಿಸಬಹುದೆಂದು ಕೋರಿದೆ.

lokesh

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago