ಬೆಂಗಳೂರು:ಮತದಾರರ ಮೇಲೆ ಚುನಾವಣಾ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಆಸೆ, ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್)ತೆರೆದಿದ್ದಾರೆ.
ಪ್ರಾಯಶಃ ಇದೇ ಮೊದಲ ಬಾರಿಗೆ ಐಟಿ ಅಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಂಟ್ರೋಲ್ ರೂಮ್ ಪ್ರಾರಂಭಿಸಿದ್ದು, ಮೊಬೈಲ್, ದೂರವಾಣಿ ಸಂಖ್ಯೆ ಹಾಗೂ ಟೋಲ್ ಫ್ರೀ ಸಂಖ್ಯೆಯನ್ನು ಪ್ರಾರಂಭಿಸಿದೆ.
ದಿನದ 24 ಗಂಟೆಯೂ ಇದು ಕಾರ್ಯ ನಿರ್ವಹಿಸಲಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ನೇತಾರರು ಬಂಗಾರ, ಮದ್ಯ, ನಗದು ಸೇರಿದಂತೆ ಯಾವುದೇ ರೀತಿಯಲ್ಲೂ ಆಮಿಷವೊಡ್ಡಿದರೆ ದೂರು ನೀಡಬೇಕೆಂದು ಆದಾಯ ತೆರಿಗೆ ಇಲಾಖೆ ಅಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ದೂರು ನೀಡುವವರ ಹೆಸರುಗಳನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಸ್ಪಷ್ಟಪಡಿಸಿರುವ ಐಟಿ, ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಚುನಾವಣೆ ನಡೆಯಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಮನವಿ ಮಾಡಿದೆ.
ದೂರು ಕೊಡುವವರು ಟೋಲ್ ಫ್ರೀ ಸಂಖ್ಯೆ 1800-425-2115 ಅದೇ ರೀತಿ ದೂರವಾಣಿ ಸಂಖ್ಯೆ 080-22861126 ಜೊತೆಗೆ ಮೊಬೈಲ್ ಸಂಖ್ಯೆ 8277422825 ಹಾಗೂ 8277413614 ಸಂಪರ್ಕಿಸಬಹುದೆಂದು ಕೋರಿದೆ.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…