ಬೆಂಗಳೂರು:ಮತದಾರರ ಮೇಲೆ ಚುನಾವಣಾ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಆಸೆ, ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್)ತೆರೆದಿದ್ದಾರೆ.
ಪ್ರಾಯಶಃ ಇದೇ ಮೊದಲ ಬಾರಿಗೆ ಐಟಿ ಅಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಂಟ್ರೋಲ್ ರೂಮ್ ಪ್ರಾರಂಭಿಸಿದ್ದು, ಮೊಬೈಲ್, ದೂರವಾಣಿ ಸಂಖ್ಯೆ ಹಾಗೂ ಟೋಲ್ ಫ್ರೀ ಸಂಖ್ಯೆಯನ್ನು ಪ್ರಾರಂಭಿಸಿದೆ.
ದಿನದ 24 ಗಂಟೆಯೂ ಇದು ಕಾರ್ಯ ನಿರ್ವಹಿಸಲಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ನೇತಾರರು ಬಂಗಾರ, ಮದ್ಯ, ನಗದು ಸೇರಿದಂತೆ ಯಾವುದೇ ರೀತಿಯಲ್ಲೂ ಆಮಿಷವೊಡ್ಡಿದರೆ ದೂರು ನೀಡಬೇಕೆಂದು ಆದಾಯ ತೆರಿಗೆ ಇಲಾಖೆ ಅಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ದೂರು ನೀಡುವವರ ಹೆಸರುಗಳನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಸ್ಪಷ್ಟಪಡಿಸಿರುವ ಐಟಿ, ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಚುನಾವಣೆ ನಡೆಯಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಮನವಿ ಮಾಡಿದೆ.
ದೂರು ಕೊಡುವವರು ಟೋಲ್ ಫ್ರೀ ಸಂಖ್ಯೆ 1800-425-2115 ಅದೇ ರೀತಿ ದೂರವಾಣಿ ಸಂಖ್ಯೆ 080-22861126 ಜೊತೆಗೆ ಮೊಬೈಲ್ ಸಂಖ್ಯೆ 8277422825 ಹಾಗೂ 8277413614 ಸಂಪರ್ಕಿಸಬಹುದೆಂದು ಕೋರಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…