BREAKING NEWS

ಮತದಾರರಿಗೆ ಆಮಿಷವೊಡ್ಡುವವರ ಮೇಲೆ ಐಟಿ ಕಣ್ಣು

ಬೆಂಗಳೂರು:ಮತದಾರರ ಮೇಲೆ ಚುನಾವಣಾ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಆಸೆ, ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್)ತೆರೆದಿದ್ದಾರೆ.
ಪ್ರಾಯಶಃ ಇದೇ ಮೊದಲ ಬಾರಿಗೆ ಐಟಿ ಅಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಂಟ್ರೋಲ್ ರೂಮ್ ಪ್ರಾರಂಭಿಸಿದ್ದು, ಮೊಬೈಲ್, ದೂರವಾಣಿ ಸಂಖ್ಯೆ ಹಾಗೂ ಟೋಲ್ ಫ್ರೀ ಸಂಖ್ಯೆಯನ್ನು ಪ್ರಾರಂಭಿಸಿದೆ.
ದಿನದ 24 ಗಂಟೆಯೂ ಇದು ಕಾರ್ಯ ನಿರ್ವಹಿಸಲಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ನೇತಾರರು ಬಂಗಾರ, ಮದ್ಯ, ನಗದು ಸೇರಿದಂತೆ ಯಾವುದೇ ರೀತಿಯಲ್ಲೂ ಆಮಿಷವೊಡ್ಡಿದರೆ ದೂರು ನೀಡಬೇಕೆಂದು ಆದಾಯ ತೆರಿಗೆ ಇಲಾಖೆ ಅಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ದೂರು ನೀಡುವವರ ಹೆಸರುಗಳನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಸ್ಪಷ್ಟಪಡಿಸಿರುವ ಐಟಿ, ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಚುನಾವಣೆ ನಡೆಯಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಮನವಿ ಮಾಡಿದೆ.
ದೂರು ಕೊಡುವವರು ಟೋಲ್ ಫ್ರೀ ಸಂಖ್ಯೆ 1800-425-2115 ಅದೇ ರೀತಿ ದೂರವಾಣಿ ಸಂಖ್ಯೆ 080-22861126 ಜೊತೆಗೆ ಮೊಬೈಲ್ ಸಂಖ್ಯೆ 8277422825 ಹಾಗೂ 8277413614 ಸಂಪರ್ಕಿಸಬಹುದೆಂದು ಕೋರಿದೆ.

lokesh

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

52 mins ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

8 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

8 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

8 hours ago