ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕದ ಜನರಿಗೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವುದನ್ನು ನಿರಾಕರಿಸಿ ಎತನಾಲ್ ಉತ್ಪಾದನೆಗೆ ಅಕ್ಕಿ ಪೂರೈಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಂ ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ವಿರೋಧಿ ಮತ್ತು ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದಕ್ಕೆ ಅನ್ನಭಾಗ್ಯ ಯೋಜನೆಯಲ್ಲಿ ನಡೆದುಕೊಂಡ ರೀತಿಯೇ ಉದಾಹರಣೆ ಎಂದಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ಸಂಪೂರ್ಣವಾಗಿ ತಿರಸ್ಕರಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜೂ.12ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯನ್ನು ಜು.1 ರಿಂದ ಜಾರಿಗೊಳಿಸಲಾಗುವುದಾಗಿ ಘೋಷಿಸಲಾಗಿದೆ. ಬಡ ಕುಟುಂಬದ ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ. ಅಕ್ಕಿ ನೀಡುವ ಈ ಯೋಜನೆಗೆ ಅಡ್ಡಿಪಡಿಸಲು ಕೇಂದ್ರ ಸರ್ಕಾರ ಜೂ.13 ರಂದು ಸುತ್ತೋಲೆ ಹೊರಡಿಸಿ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಮಾರಾಟ ಮಾಡದಂತೆ ಕೇಂದ್ರ ಆಹಾರ ನಿಗಮಕ್ಕೆ ತಾಕೀತು ಮಾಡಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ಸರ್ಕಾರ ಕೇಂದ್ರ ನಿಗದಿಪಡಿಸಿದಂತೆ ಪ್ರತಿ ಕ್ವಿಂಟಾಲ್ಗೆ 3,400 ರೂ.ಗಳನ್ನು ಪಾವತಿಸಿ ಅಕ್ಕಿ ಖರೀದಿಸಲು ಸಿದ್ಧವಿತ್ತು. ಆದರೆ ಆ ಕಿಟಕಿಯನ್ನು ಬಂದ್ ಮಾಡಿರುವ ಕೇಂದ್ರಸರ್ಕಾರ ಪೆಟ್ರೋಲಿಯಂ ಜೊತೆ ಮಿಶ್ರಣ ಮಾಡಲು ಪ್ರತಿ ಕ್ವಿಂಟಾಲ್ಗೆ 2,000 ರೂ.ನಂತೆ ಅಕ್ಕಿಯನ್ನು ಮಾರಾಟ ಮಾಡುವುದನ್ನು ಮುಂದುವರೆಸಿದೆ.ಆಹಾರ ಭದ್ರತಾ ಕಾಯಿದೆ ಜನರಿಗೆ ಆಹಾರ ಒದಗಿಸುವ ಆದ್ಯತೆ ಹೊಂದಿರಬೇಕು ಎಂದು ಹೇಳಿದ್ದಾರೆ.
ಇದೇ ಆರೋಪಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. ಕೇಂದ್ರ ಆಹಾರ ನಿಗಮದ ಗೋಧಾಮಗಳು ಕರ್ನಾಟಕದಲ್ಲೇ ಇವೆ. ಅಲ್ಲಿಂದ ಅಕ್ಕಿ ಖರೀದಿಸುವುದಾದರೆ ಸಾಗಾಣಿಕೆ ವೆಚ್ಚ ಮತ್ತು ಸಮಯ ಉಳಿತಾಯವಾಗುತ್ತಿತ್ತು. ಇತರೆ ರಾಜ್ಯಗಳಿಂದ ಅಕ್ಕಿ ತರಿಸುವುದು ದುಬಾರಿಯಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ತಡೆಯುವ ಬಿಜೆಪಿಯ ಕುತಂತ್ರದಿಂದ ರಾಜ್ಯಕ್ಕೆ ಹೊರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…