ನ್ಯೂಯಾರ್ಕ್ : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಜಮ್ಮು ಕಾಶ್ಮೀರದ ವಿಷಯ ಪ್ರಸ್ತಾಪ ಮಾಡಿದ ಪಾಕಿಸ್ತಾನಕ್ಕೆ ಭಾರತ ಸೂಕ್ತ ರೀತಿಯಲ್ಲಿ ತಿರುಗೇಟು ನೀಡಿದೆ. ಭಾರತದ ಆಂತರಿಕ ವಿಷಯಗಳಲ್ಲಿ ಪಾಕಿಸ್ತಾನ ಮೂಗು ತೂರಸದೆ ಇರುವುದು ಒಳಿತು ಎಚ್ಚರಿಕೆ ಸಂದೇಶ ರವಾನಿಸಿದೆ.
ವಿಶ್ವಸಂಸ್ಥೆಯಲ್ಲಿನ ಭಾರತದ ಮಿಷನ್ನ ಸಲಹೆಗಾರರಾದ ಆರ್ ಮಧು ಸೂದನ್ ಪ್ರತಿಕ್ರಿಯೆ ನೀಡಿ, ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶದೊಂದಿಗೆ ಗುರುತಿಸಿಕೊಳ್ಳುವ ಅಗತ್ಯವಿಲ್ಲ ಎಂದು ನೇರವಾಗಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.
ನಿಮ್ಮ ದೇಶದ ಸ್ವಂತ ವಿಷಯಗಳ ಬಗ್ಗೆ ಗಮನ ಹರಿಸಿ ಭಾರತದ ವಿಷಯಗಳ ಬಗ್ಗೆ ನಿಮಗೆ ಕಾಳಜಿ ಬೇಡ. ನಿಮ್ಮ ಸಮಸ್ಯೆಯನ್ನು ನೀವು ಸರಿ ಪಡಿಸಿಕೊಳ್ಳಿ ಎಂದಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ಸಮಸ್ಯೆ ಪ್ರಸ್ತಾಪ ಮಾಡುವ ಬದಲು ತನ್ನ ಆಂತರಿಕ ವ್ಯವಹಾರಗಳ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಮತ್ತು ತಮ್ಮದೇ ಆದ ಗಡಿಗಳನ್ನು ಪುನಃಸ್ಥಾಪಿಸಿ ಎಂದು ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.
ಸಶಸ್ತ್ರ ಸಂಘರ್ಷದಲ್ಲಿ ನಾಗರಿಕರ ರಕ್ಷಣೆ’ ಕುರಿತು ಮುಕ್ತ ಚರ್ಚೆಯಲ್ಲಿ ಮಾತ£ ಆರ್ ಮಧು ಸೂದನ್, “ಈ ಮಂಡಳಿಯ ಸಮಯವನ್ನು ಉತ್ತಮವಾಗಿ ಬಳಸಿಕೊಳ್ಳಲು, ಸಂಬಂಧಪಟ್ಟ ನಿಯೋಗ ಅವರ ಆಂತರಿಕ ವಿಷಯಗಳನ್ನು ಪರಿಹರಿಸಲು ಮತ್ತು ಮರುಸ್ಥಾಪಿಸಲು ಕೇಂದ್ರೀಕರಿಸಲು ಸಲಹೆ ನೀಡುತ್ತೇನೆ ಎಂದಿದ್ದಾರೆ.
ನನ್ನ ದೇಶದ ವಿರುದ್ಧ ಕ್ಷುಲ್ಲಕ ಆರೋಪಗಳನ್ನು ಮಾಡುವುದಕ್ಕಿಂತ ಪಾಕಿಸ್ತಾನ ಅವರ ಸ್ವಂತ ಗಡಿ ರಕ್ಷಣೆ ಮಾಡಿಕೊಳ್ಳಲು ಗಮನ ಹರಿಸುವುದು ಉತ್ತಮ ಎಂದು ಕಿವಿಮಾತು ಹೇಳಿದ್ದಾರೆ.
ಆಹಾರ ಅಭದ್ರತೆಯ ಕುರಿತಾದ ಯುಎನ್ಎಸ್ಸಿಯ ಮುಕ್ತ ಚರ್ಚೆಯಲ್ಲಿ ಪಾಕಿಸ್ತಾನದ ಪ್ರತಿನಿಧಿಯೊಬ್ಬರು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ. “ದುರದೃಷ್ಟವಶಾತ್, ಆಹಾರ ಭದ್ರತೆಯ ಪ್ರಮುಖ ವಿಷಯದಿಂದ ಈ ಮಂಡಳಿಯ ಗಮನವನ್ನು ಬೇರೆಡೆಗೆ ತಿರುಗಿಸಲು ನಿಯೋಗ ಮತ್ತೊಮ್ಮೆ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿರುವುದನ್ನು ನೋಡಿದ್ದೇವೆ” ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…