ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದ ʼರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆʼ ಎಂಬ ಹೇಳಿಕೆಗೆ ಮರುತ್ತರ ನಿಡಿರುವ ಅವರು ರಾಜ್ಯದಲ್ಲಿ ದಾರಿ ತಪ್ಪಿರುವುದು ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದಿದ್ದಾರೆ.
ಅಮಾಯಕ ಮಹಿಳೆಯರನ್ನು ನೀವು ಹೀಗೆ ಶೋಷಣೆ ಮಾಡಿ, ಅವ ಅಮಾಯಕತನ, ಬಡತನ ಹಾಗೂ ಕಷ್ಟದ ಪರಿಸ್ಥಿತಿಯ ಲಾಭ ತೆಗೆದುಕೊಂಡು ಇಡೀ ಪ್ರಪಂಚದ ದೊಡ್ಡ ಲೈಂಗಿಕ ಹಗರಣ ಮಾಡಿದ್ದೀರ. ಈಗ ಹೇಳಿ ಯಾರು ದಾರಿ ತಪ್ಪಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಅವರೆ, ಕುಮಾರಸ್ವಾಮಿ ಅವರೆ, ಭವಾನಿ ರೇವಣ್ಣ ಅವರೆ ರಾಜ್ಯದ ಜನತೆಗೆ ಉತ್ತರ ನೀಡಿ. ನಿಮ್ಮ ಮನೆಯಲ್ಲಿ ನಡೆಯುತ್ತಿರುವ ಈ ಕೃತ್ಯಕ್ಕೆ ಬೆಂಬಲ ನೀಡುವ ಮೂಲಕ ಈ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದೀರಿ ಎಂದು ಆರೋಪಿಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…