BREAKING NEWS

ಬಿಜೆಪಿ ಮುಕ್ತ ಭಾರತ ಮಾಡುವುದು ನಮ್ಮೆಲ್ಲರ ಕರ್ತವ್ಯ: ಡಿಕೆ ಶಿವಕುಮಾರ್‌

ಬೆಂಗಳೂರು : ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುತ್ತಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಪಕ್ಷದಲ್ಲಿ ಹುಮ್ಮಸ್ಸು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕ್ವಿಟ್ ಇಂಡಿಯಾ ಚಳವಳಿಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದೆ ಬ್ರಿಟಿಷರನ್ನು ತೊಲಗಿಸಲು ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಕಾಂಗ್ರೆಸಿಗರು ಭಾರತ ಬಿಟ್ಟು ತೊಲಗಿ ಎಂಬ ಚಳುವಳಿ ನಡೆಸಿದರು. 81 ವರ್ಷಗಳ ಬಳಿಕ ಈಗಿನ ಕಾಂಗ್ರೆಸಿಗರು ಕೋಮುವಾದಿ, ಸರ್ವಾಕಾರಿಗಳ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಹೇಳಿದರು.

ದೇಶದ ಎಲ್ಲಾ ವಿಪಕ್ಷಗಳ ನಾಯಕರು ಬೆಂಗಳೂರಿಗೆ ಬಂದು ಇಂಡಿಯಾ ರಾಜಕೀಯ ಕೂಟದ ಮೂಲಕ ಹೊಸ ಅಧ್ಯಯನಕ್ಕೆ ಮುನ್ನುಡಿ ಬರೆದಿದ್ದು, ಬೆಂಗಳೂರು ಅದಕ್ಕೆ ಸಾಕ್ಷಿಯಾಗಿದೆ. ನಮ್ಮ ಮುಂದಿನ ಗುರಿ 2024 ರ ಲೋಕಸಭೆ ಚುನಾವಣೆಯಷ್ಟೇ ಅಲ್ಲ, 2028 ರ ವಿಧಾನಸಭೆ ಚುನಾವಣೆ ಕೂಡಾ ಆಗಿದೆ. ಅದಕ್ಕೆ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಕಳೆದ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡಿ ಸ್ಪಷ್ಟ ಬಹುಮತದಿಂದ ಪಕ್ಷವನ್ನು ಗೆಲ್ಲಿಸುವ ಮೂಲಕ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ.

ಪಕ್ಷದ ವರೀಷ್ಠರು ಕೂಡ ಇದನ್ನು ಎಲ್ಲಾ ರಾಜ್ಯದ ನಾಯಕರಿಗೆ ಹೇಳುತ್ತಿದ್ದಾರೆ. ಮೇಕೆದಾಟು ಪಾದಯಾತ್ರೆ, ಸ್ವತಂತ್ರ ನಡಿಗೆ, ಭಾರತ್‍ಜೋಡೋ ಯಾತ್ರೆಗಳು ಪಕ್ಷಕ್ಕೆ ಬಲ ತಂದುಕೊಟ್ಟಿದ್ದವು. ಚುನಾವಣೆಗೆ ಮೊದಲೇ ನಾನು 136 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆ. ಮುಂದಿನ ಹಂತದಲ್ಲಿ ಅದು 141ಕ್ಕೆ ಏರಿಕೆಯಾಗಿತ್ತು. ಇದನ್ನು ಹೇಳಿದಾಗ ಕೆಲವರು ನಕ್ಕು ಡಿ.ಕೆ.ಶಿವಕುಮಾರ್‌ಗೆ ಬುದ್ಧಿಭ್ರಮಣೆಯಾಗಿದೆ ಎನ್ನುತ್ತಿದ್ದರು. ಅತಂತ್ರ ವಿಧಾನಸಭೆ ಬರುತ್ತದೆ, ಮೈತ್ರಿ ಸರ್ಕಾರ ಅನಿವಾರ್ಯ ಎಂದು ಕೆಲವರು ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದರು ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪ್ರಕಟಿಸುವಾಗ ನನ್ನನ್ನು ಸಮಾಧಾನಪಡಿಸಲು ಮಾತನಾಡಿದ ಸೋನಿಯಾಗಾಂಧಿಯವರು, ಅಷ್ಟು ಕರಾರುವಕ್ಕಾಗಿ 136 ಸ್ಥಾನವನ್ನು ಗೆಲ್ಲುತ್ತೇನೆ ಎಂದು ಹೇಗೆ ಹೇಳಿದ್ದಿರಿ ಎಂದು ಪ್ರಶ್ನಿಸಿದರು. ನಾನು ಹೊಲ ಉತ್ತು, ಕಳೆ ಕಿತ್ತು ದುಡಿಯುತ್ತಿದ್ದೇನೆ. ಹಾಗಾಗಿ ಸ್ಪಷ್ಟವಾಗಿ ಗೊತ್ತಿತ್ತು ಎಂದು ಡಿ.ಕೆ.ಶಿವಕುಮಾರ್ ಪ್ರತ್ಯುತ್ತರಿಸಿದ್ದಾಗಿ ತಿಳಿಸಿದರು.

224 ಸ್ಥಾನಗಳಲ್ಲಿ 115 ಕ್ಷೇತ್ರಗಳಿಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಎಚ್.ಎಂ.ರೇವಣ್ಣ, ಉಗ್ರಪ್ಪ, ಪದ್ಮಾವತಿಯಂತಹ ಹಿರಿಯ ನಾಯಕರು ಕೇಳಿದ ಕ್ಷೇತ್ರಗಳಿಗೆ ಟಿಕೆಟ್ ನೀಡಬೇಕಾಗಿತ್ತು. ಆದರೆ ಅದು ಆಗಲಿಲ್ಲ. ಶೇ.20 ರಷ್ಟು ಸ್ಥಾನಗಳಲ್ಲಿ ಹೆಚ್ಚು ಕಮ್ಮಿಯಾಗಿದೆ. 25 ರಷ್ಟು ನಾಯಕರಿಗೆ ಅನ್ಯಾಯವಾಗಿದೆ. ಅವರೆಲ್ಲಾ ತಮ್ಮ ವೈಯಕ್ತಿಕ ಹಿತಾಸಕ್ತಿ ಮರೆತು ತ್ಯಾಗ ಮಾಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲಿ ಎಂದು ದುಡಿದಿದ್ದಾರೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

ಕೆಲವರು ನಾನು ಮಾಟ, ಮಂತ್ರ, ಮಾಯ ಮಾಡಿ ಸರ್ಕಾರವನ್ನು ತಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಇದರ ಹಿಂದೆ ನಮ್ಮ ಹೋರಾಟ ಇದೆ. ಭಾಗ್ಯಾದ ಲಕ್ಷ್ಮೀ ಬಾರಮ್ಮ ಎಂದು ಹಾಡು ಹೇಳುವ ಮೂಲಕ ಪಂಚಖಾತ್ರಿ ಸೇರಿದಂತೆ ಹಲವು ಯೋಜನೆಗಳ ಭರವಸೆ ನೀಡಿದ್ದು ಹಾಗೂ ಜಾರಿಗೊಳಿಸುವುದರ ಬಗ್ಗೆ ಡಿ.ಕೆ.ಶಿವಕುಮಾರ್ ವಿವರಿಸಿದರು.

ನಾವು ತ್ಯಾಗ ಮಾಡಿದ್ದೇವೆ. ಜೀವ ಪಣಕ್ಕಿಟ್ಟು ಕೋವಿಡ್ ಸಮಯದಲ್ಲಿ ಕೆಲಸ ಮಾಡಿದ್ದೇವೆ. ಅದರ ಫಲ ಸರ್ಕಾರ ರಚನೆಯಾಗಿದೆ ಎಂದರು.

ವಿಜಯ ಸಾಧಕರಿಗೆ ಅಧಿಕಾರ :
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣಜಿತ್ ಸುರ್ಜೆವಾಲ ತಮಗೆ ಪತ್ರ ಬರೆದಿದ್ದು, ನಿಗಮ ಮಂಡಳಿ ಸೇರಿದಂತೆ ಹಲವು ನೇಮಕಾತಿಗಳಿಗೆ ಮುಖಂಡರು, ಕಾರ್ಯಕರ್ತರನ್ನು ಪರಿಗಣಿಸುವಾಗ ಅವರ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಡೆದಿರುವ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಈ ಕುರಿತು ವರದಿ ನೀಡುವಂತೆ ತಾವು ಜಿಲ್ಲಾ ಕಾಂಗ್ರೆಸ್‍ಗಳಿಗೆ ಸೂಚನೆ ನೀಡಿದ್ದೇವೆ. ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ, ಬೂತ್ ಮಟ್ಟದಲ್ಲಿ ಪಕ್ಷವನ್ನು ಗೆಲ್ಲಿಸಬೇಕು. ಅಂತಹ ವಿಜಯ ಸಾಧಕರಿಗೆ ಮಾತ್ರ ಅವಕಾಶ ನೀಡಲಾಗುವುದು. ಶಾಸಕರಿಗೂ ಸೂಚನೆ ನೀಡಲಾಗಿದ್ದು, ಹಿಂಬಾಲಕರನ್ನು ಪರಿಗಣಸದೆ ಪಕ್ಷಕ್ಕೆ ಕೆಲಸ ಮಾಡಿದವರಿಗೆ ಅವಕಾಶ ನೀಡುವಂತೆ ತಾಕೀತು ಮಾಡಲಾಗಿದೆ. ಕಾರ್ಯಕರ್ತರ ಮನವಿಯ ಪಕ್ಕದಲ್ಲೇ ಬೂತ್ ಮಟ್ಟದ ಸಾಧನೆಗಳನ್ನು ಉಲ್ಲೇಖಿಸಲಾಗುವುದು ಎಂದು ಹೇಳಿದರು.

ಪಂಚಖಾತ್ರಿ ಯೋಜನೆಗಳ ಲಾಭವನ್ನು ಕಾಂಗ್ರೆಸಿಗರಷ್ಟೇ ಪಡೆದುಕೊಳ್ಳುತ್ತಿಲ್ಲ. ಬಿಜೆಪಿ, ಜೆಡಿಎಸ್‍ನವರೂ ಅನುಭವಿಸುತ್ತಿದ್ದಾರೆ. ಅವರನ್ನೂ ಪಕ್ಷದತ್ತ ಸೆಳೆಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಚಿವರಾದ ಈಶ್ವರ ಖಂಡ್ರೆ, ಕೆ.ಎಚ್.ಮುನಿಯಪ್ಪ, ಶಾಸಕರಾದ ಎ.ಎಸ್.ಪೆÇನ್ನಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಸಲೀಂ ಅಹಮ್ಮದ್, ವಿಧಾನಪರಿಷತ್ ಸದಸ್ಯ ನಜೀರ್ ಅಹಮ್ಮದ್, ಮಾಜಿ ಸದಸ್ಯರಾದ ಹೆಚ್.ಎಂ.ರೇವಣ್ಣ, ಉಗ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

2 hours ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

2 hours ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

2 hours ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

2 hours ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

2 hours ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

2 hours ago