BREAKING NEWS

ಹಿರಿಯರು ‘ಹೊಂದಾಣಿಕೆ’ ಮಾಡಿಕೊಂಡಿರುವುದು ನಿಜ: ಸಿ.ಪಿ. ಯೋಗೀಶ್ವರ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೆಲ ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಅಂತಾ ನನಗೆ ಅನಿಸುತ್ತಿದೆ. ಆದರೆ, ಇದನ್ನು ಈಗ ಮಾತನಾಡಿದರೆ ನಾವು ಬೆಂಕಿ ಹಚ್ಚಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೀಶ್ವರ್‌ ಹೇಳಿದ್ದಾರೆ.

ಈ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಂಸದ ಪ್ರತಾಪ್‌ ಸಿಂಹ ಬಳಿಕ “ಹೊಂದಾಣಿಕೆ ರಾಜಕೀಯ’ದ ಬಗ್ಗೆ ಸಿಪಿವೈ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಾಗಿರಲಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡಲಿಲ್ಲ, ಸಚಿವ ಸ್ಥಾನಗಳನ್ನು ಖಾಲಿ ಬಿಡಲಾಯಿತು. ಇದರಿಂದ ಪಕ್ಷದಲ್ಲಿ ಆಂತರಿಕ ಬೇಗುದಿ ಸೃಷ್ಟಿಯಾಯಿತು ಎಂದರು.

ಅದಲ್ಲದೇ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಹೊಂದಾಣಿಕೆಯಾಗಿದೆ. ಇದರ ಜೊತೆಗೆ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಹಾಕುವ ಪ್ರಯತ್ನ ನಡೆಯಲೇ ಇಲ್ಲ. ಈ ಎಲ್ಲ ಅಂಶಗಳು ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ. ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಅನಿಸಿದೆ. ಅದರ ಬಗ್ಗೆ ಮಾತನಾಡಿದರೆ ಈಗ ಬೆಂಕಿ ಹಚ್ಚಿದಂತೆ ಆಗಲಿದೆ. ಈ ಬಗ್ಗೆ ಈಗ ಚರ್ಚೆ ಅನಗತ್ಯ. ಮುಂದಿನ ಚುನಾವಣೆ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ಸ್ಪರ್ಧೆ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎನ್ನುವ ಯೋಚನೆ ನನಗೆ ಇದೆ. ಆದರೆ, ಅದು ಇನ್ನೂ ಅಂತಿಮವಾಗಿಲ್ಲ. ಅಂತಿಮವಾಗಿ ಎಲ್ಲವನ್ನೂ ಪಕ್ಷ ತೀರ್ಮಾನ ಮಾಡಲಿದೆ. ನಾನು ದಿಲ್ಲಿಯಲ್ಲಿ ಕೆಲವು ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆಯ ಬಗ್ಗೆಯೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ರಾಜಕೀಯ ಸಾಕಾಗಿದೆ ಎಂದ ಸಂಸದ ಡಿಕೆ ಸುರೇಶ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣಾ ರಾಜಕೀಯದ ಬಗ್ಗೆ ಡಿಕೆ ಸುರೇಶ್‌ ಯಾಕೆ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ ಎಂಬುದು ಗೊತ್ತಿಲ್ಲ. ಅಷ್ಟು ಸುಲಭವಾಗಿ ರಾಜಕೀಯ ಬಿಡುವ ವ್ಯಕ್ತಿ ಅವರಲ್ಲ. ಡಿ.ಕೆ. ಸುರೇಶ್‌ ಅವರ ಹೇಳಿಕೆ ಹಿಂದೆ ಗೂಡಾರ್ಥ ಇದೆ. ಅವರ ಅಣ್ಣ ಡಿ.ಕೆ. ಶಿವಕುಮಾರ್‌ ಅವರನ್ನು ಸಿಎಂ ಮಾಡಲು ಪ್ರಯತ್ನಿಸಿರಬೇಕು. ದಿಲ್ಲಿಗಿಂತ ಕರ್ನಾಟಕದಲ್ಲಿ ಸಕ್ರಿಯರಾಗಲು ನಿರ್ಧರಿಸಿರಬೇಕು ಅನಿಸುತ್ತದೆ ಎಂದರು.

andolanait

Recent Posts

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

8 mins ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

46 mins ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

1 hour ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

1 hour ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

3 hours ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

3 hours ago