BREAKING NEWS

ಹಿರಿಯರು ‘ಹೊಂದಾಣಿಕೆ’ ಮಾಡಿಕೊಂಡಿರುವುದು ನಿಜ: ಸಿ.ಪಿ. ಯೋಗೀಶ್ವರ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೆಲ ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಅಂತಾ ನನಗೆ ಅನಿಸುತ್ತಿದೆ. ಆದರೆ, ಇದನ್ನು ಈಗ ಮಾತನಾಡಿದರೆ ನಾವು ಬೆಂಕಿ ಹಚ್ಚಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೀಶ್ವರ್‌ ಹೇಳಿದ್ದಾರೆ.

ಈ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಂಸದ ಪ್ರತಾಪ್‌ ಸಿಂಹ ಬಳಿಕ “ಹೊಂದಾಣಿಕೆ ರಾಜಕೀಯ’ದ ಬಗ್ಗೆ ಸಿಪಿವೈ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಾಗಿರಲಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡಲಿಲ್ಲ, ಸಚಿವ ಸ್ಥಾನಗಳನ್ನು ಖಾಲಿ ಬಿಡಲಾಯಿತು. ಇದರಿಂದ ಪಕ್ಷದಲ್ಲಿ ಆಂತರಿಕ ಬೇಗುದಿ ಸೃಷ್ಟಿಯಾಯಿತು ಎಂದರು.

ಅದಲ್ಲದೇ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಹೊಂದಾಣಿಕೆಯಾಗಿದೆ. ಇದರ ಜೊತೆಗೆ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಹಾಕುವ ಪ್ರಯತ್ನ ನಡೆಯಲೇ ಇಲ್ಲ. ಈ ಎಲ್ಲ ಅಂಶಗಳು ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ. ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಅನಿಸಿದೆ. ಅದರ ಬಗ್ಗೆ ಮಾತನಾಡಿದರೆ ಈಗ ಬೆಂಕಿ ಹಚ್ಚಿದಂತೆ ಆಗಲಿದೆ. ಈ ಬಗ್ಗೆ ಈಗ ಚರ್ಚೆ ಅನಗತ್ಯ. ಮುಂದಿನ ಚುನಾವಣೆ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ಸ್ಪರ್ಧೆ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎನ್ನುವ ಯೋಚನೆ ನನಗೆ ಇದೆ. ಆದರೆ, ಅದು ಇನ್ನೂ ಅಂತಿಮವಾಗಿಲ್ಲ. ಅಂತಿಮವಾಗಿ ಎಲ್ಲವನ್ನೂ ಪಕ್ಷ ತೀರ್ಮಾನ ಮಾಡಲಿದೆ. ನಾನು ದಿಲ್ಲಿಯಲ್ಲಿ ಕೆಲವು ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆಯ ಬಗ್ಗೆಯೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ರಾಜಕೀಯ ಸಾಕಾಗಿದೆ ಎಂದ ಸಂಸದ ಡಿಕೆ ಸುರೇಶ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣಾ ರಾಜಕೀಯದ ಬಗ್ಗೆ ಡಿಕೆ ಸುರೇಶ್‌ ಯಾಕೆ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ ಎಂಬುದು ಗೊತ್ತಿಲ್ಲ. ಅಷ್ಟು ಸುಲಭವಾಗಿ ರಾಜಕೀಯ ಬಿಡುವ ವ್ಯಕ್ತಿ ಅವರಲ್ಲ. ಡಿ.ಕೆ. ಸುರೇಶ್‌ ಅವರ ಹೇಳಿಕೆ ಹಿಂದೆ ಗೂಡಾರ್ಥ ಇದೆ. ಅವರ ಅಣ್ಣ ಡಿ.ಕೆ. ಶಿವಕುಮಾರ್‌ ಅವರನ್ನು ಸಿಎಂ ಮಾಡಲು ಪ್ರಯತ್ನಿಸಿರಬೇಕು. ದಿಲ್ಲಿಗಿಂತ ಕರ್ನಾಟಕದಲ್ಲಿ ಸಕ್ರಿಯರಾಗಲು ನಿರ್ಧರಿಸಿರಬೇಕು ಅನಿಸುತ್ತದೆ ಎಂದರು.

andolanait

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

2 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

3 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

14 hours ago