BREAKING NEWS

ಹಿರಿಯರು ‘ಹೊಂದಾಣಿಕೆ’ ಮಾಡಿಕೊಂಡಿರುವುದು ನಿಜ: ಸಿ.ಪಿ. ಯೋಗೀಶ್ವರ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೆಲ ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಅಂತಾ ನನಗೆ ಅನಿಸುತ್ತಿದೆ. ಆದರೆ, ಇದನ್ನು ಈಗ ಮಾತನಾಡಿದರೆ ನಾವು ಬೆಂಕಿ ಹಚ್ಚಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೀಶ್ವರ್‌ ಹೇಳಿದ್ದಾರೆ.

ಈ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಂಸದ ಪ್ರತಾಪ್‌ ಸಿಂಹ ಬಳಿಕ “ಹೊಂದಾಣಿಕೆ ರಾಜಕೀಯ’ದ ಬಗ್ಗೆ ಸಿಪಿವೈ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಾಗಿರಲಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡಲಿಲ್ಲ, ಸಚಿವ ಸ್ಥಾನಗಳನ್ನು ಖಾಲಿ ಬಿಡಲಾಯಿತು. ಇದರಿಂದ ಪಕ್ಷದಲ್ಲಿ ಆಂತರಿಕ ಬೇಗುದಿ ಸೃಷ್ಟಿಯಾಯಿತು ಎಂದರು.

ಅದಲ್ಲದೇ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಹೊಂದಾಣಿಕೆಯಾಗಿದೆ. ಇದರ ಜೊತೆಗೆ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಹಾಕುವ ಪ್ರಯತ್ನ ನಡೆಯಲೇ ಇಲ್ಲ. ಈ ಎಲ್ಲ ಅಂಶಗಳು ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ. ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಅನಿಸಿದೆ. ಅದರ ಬಗ್ಗೆ ಮಾತನಾಡಿದರೆ ಈಗ ಬೆಂಕಿ ಹಚ್ಚಿದಂತೆ ಆಗಲಿದೆ. ಈ ಬಗ್ಗೆ ಈಗ ಚರ್ಚೆ ಅನಗತ್ಯ. ಮುಂದಿನ ಚುನಾವಣೆ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ಸ್ಪರ್ಧೆ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎನ್ನುವ ಯೋಚನೆ ನನಗೆ ಇದೆ. ಆದರೆ, ಅದು ಇನ್ನೂ ಅಂತಿಮವಾಗಿಲ್ಲ. ಅಂತಿಮವಾಗಿ ಎಲ್ಲವನ್ನೂ ಪಕ್ಷ ತೀರ್ಮಾನ ಮಾಡಲಿದೆ. ನಾನು ದಿಲ್ಲಿಯಲ್ಲಿ ಕೆಲವು ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆಯ ಬಗ್ಗೆಯೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ರಾಜಕೀಯ ಸಾಕಾಗಿದೆ ಎಂದ ಸಂಸದ ಡಿಕೆ ಸುರೇಶ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣಾ ರಾಜಕೀಯದ ಬಗ್ಗೆ ಡಿಕೆ ಸುರೇಶ್‌ ಯಾಕೆ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ ಎಂಬುದು ಗೊತ್ತಿಲ್ಲ. ಅಷ್ಟು ಸುಲಭವಾಗಿ ರಾಜಕೀಯ ಬಿಡುವ ವ್ಯಕ್ತಿ ಅವರಲ್ಲ. ಡಿ.ಕೆ. ಸುರೇಶ್‌ ಅವರ ಹೇಳಿಕೆ ಹಿಂದೆ ಗೂಡಾರ್ಥ ಇದೆ. ಅವರ ಅಣ್ಣ ಡಿ.ಕೆ. ಶಿವಕುಮಾರ್‌ ಅವರನ್ನು ಸಿಎಂ ಮಾಡಲು ಪ್ರಯತ್ನಿಸಿರಬೇಕು. ದಿಲ್ಲಿಗಿಂತ ಕರ್ನಾಟಕದಲ್ಲಿ ಸಕ್ರಿಯರಾಗಲು ನಿರ್ಧರಿಸಿರಬೇಕು ಅನಿಸುತ್ತದೆ ಎಂದರು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago