ಬೆಳಗಾವಿ : ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸಿಡಿಸಿದ್ದ ಪೆನ್ಡ್ರೈವ್ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಅವರ ಪೆನ್ ಡ್ರೈವ್ನಲ್ಲಿ ಏನಿರಬಹುದು ಎನ್ನುವ ಕುತೂಹಲ ಜನರಲ್ಲಿ ಇದ್ದರೆ, ಆಡಳಿತರೂಢ ಸರ್ಕಾರಕ್ಕೆ ಆತಂಕಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಹ ಪೆನ್ಡ್ರೈವ್ ಬಾಂಬ್ ಸಿಡಿಸಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ನನ್ನ ಬಳಿ ಪೆನ್ಡ್ರೈವ್ ಇರುವುದು ಸತ್ಯ. ಯಾರು ಏನೇನು ಕುತಂತ್ರ ಮಾಡುತ್ತಿದ್ದರು ಎಂಬ ಕುರಿತ ಪೆನ್ಡ್ರೈವ್ ನನ್ನ ಬಳಿ ಇದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದ್ದಾರೆ.
ಯಾರ್ಯಾರು ಪಕ್ಷದಲ್ಲಿ ಕಾಲು ಎಳೆಯುವ ಕೆಲಸ ಮಾಡುತ್ತಿದ್ದರು. ಏನೇನು ಇತ್ತು ಎನ್ನುವುದಕ್ಕೆ ಸಂಬಂಧಿಸಿದ ಪೆನ್ಡ್ರೈವ್ ನನ್ನ ಹತ್ತಿರ ಇದೆ. ಆದರೆ, ಯಾರಾದರೂ ಸವಾಲು ಹಾಕಿದರೆ ಹಾಗೇ ತೋರಿಸುವಂತೆ ಹಠ ಹಿಡಿದರೆ ಸಂದರ್ಭ ಬಂದಾಗ ಪೆನ್ಡ್ರೈವ್ ತೋರಿಸುವೆ. ಅದನ್ನ ತೋರಿಸಿದ ಮೇಲೆ ಯಾರದ್ದು ಅಂತಾ ಗೊತ್ತಾಗುತ್ತೆ ಎಂದು ಹೇಳಿದರು. ಇದರೊಂದಿಗೆ ಬಿಜೆಪಿಯಲ್ಲಿದ್ದಾಗ ತಮಗೆ ಯಾರೆಲ್ಲಾ ಏನೆಲ್ಲ ಮಾಡಿದ್ದಾರೆ ಅದೆಲ್ಲ ಪೆನ್ಡ್ರೈವ್ನಲ್ಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ನವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಬೇನಾಮಿಗಳನ್ನು ಬೇನಾಮಿ ಎನ್ನದೇ ಇನ್ನು ಏನನ್ನಬೇಕು? ಕುಮಾರಸ್ವಾಮಿ ಪೆನ್ ಡ್ರೈವ್ ಬಿಟ್ಟ ಮರು ಕ್ಷಣವೇ ನಾನು ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಅವರು ಬುಟ್ಟಿಯಲ್ಲಿ ಹಾವಿದೆ ಹಾವಿದೆ ಅಂತಿದ್ದಾರೆ. ಹಾಗಾದರೆ ನಮ್ಮ ಬುಟ್ಟಿಯಲ್ಲೂ ಹಾವಿದೆ. ಅವರ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಹೇಳಿದರು.
ನನಗೆ ಬಿಜೆಪಿ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ಗೆ ಸೇರಿದ್ದೇನೆ. ನನಗೆ ಬಿಜೆಪಿ ಮಾಡಿದ ಅವಮಾನ ರೀತಿ ಆಗಬಾರದು ಗೌರವದಿಂದ ನಡೆದುಕೊಂಡು ಹೋಗಬೇಕು ಎಂದು ಕಾಂಗ್ರೆಸ್ಗೆ ಬಂದಿದ್ದೇನೆ. ನನ್ನ ಕ್ಷೇತ್ರಕ್ಕೆ ನೀರಾವರಿ ಯೋಜನೆ ನೀಡಬೇಕು ಎಂದಿದ್ದೆ. ಕ್ಷೇತ್ರದ ಜನತೆ ಬಹಳ ದೊಡ್ಡ ಋಣ ನನ್ನ ಮೇಲಿದೆ. ಕಾಗವಾಡ ಶಾಸಕ ರಾಜು ಕಾಗೆ, ನಾನು ಸಿಎಂ ಹಾಗೂ ಡಿಸಿಎಂ ಮುಂದೆ ಮಹತ್ವದ ಬೇಡಿಕೆ ಮಂಡಿಸುತ್ತೇವೆ, ಕಾಗವಾಡ ಶಾಸಕ ರಾಜು ಕಾಗೆ, ನಾನು ಮಹತ್ವದ ಬೇಡಿಕೆ ಮಂಡಿಸುತ್ತೇವೆ. ರಾಜು ಕಾಗೆ, ನಾನು ಜೋಡೆತ್ತಾಗಿ ಕಾರ್ಯ ಮಾಡುತ್ತೇವೆ ಎಂದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…