BREAKING NEWS

ನನ್ನ ಬಳಿ ಪೆನ್​ಡ್ರೈವ್​ ಇರುವುದು ಸತ್ಯ : ಲಕ್ಷ್ಮಣ ಸವದಿ

ಬೆಳಗಾವಿ : ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಿಡಿಸಿದ್ದ ಪೆನ್​ಡ್ರೈವ್ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಅವರ ಪೆನ್ ಡ್ರೈವ್​ನಲ್ಲಿ ಏನಿರಬಹುದು ಎನ್ನುವ ಕುತೂಹಲ ಜನರಲ್ಲಿ ಇದ್ದರೆ, ಆಡಳಿತರೂಢ ಸರ್ಕಾರಕ್ಕೆ ಆತಂಕಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಹ ಪೆನ್​ಡ್ರೈವ್ ಬಾಂಬ್ ಸಿಡಿಸಿದ್ದಾರೆ.

ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ನನ್ನ ಬಳಿ ಪೆನ್​ಡ್ರೈವ್​ ಇರುವುದು ಸತ್ಯ. ಯಾರು ಏನೇನು ಕುತಂತ್ರ ಮಾಡುತ್ತಿದ್ದರು ಎಂಬ ಕುರಿತ ಪೆನ್​ಡ್ರೈವ್ ​ನನ್ನ ಬಳಿ ಇದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದ್ದಾರೆ.

ಯಾರ್ಯಾರು ಪಕ್ಷದಲ್ಲಿ ಕಾಲು ಎಳೆಯುವ ಕೆಲಸ ಮಾಡುತ್ತಿದ್ದರು. ಏನೇನು ಇತ್ತು ಎನ್ನುವುದಕ್ಕೆ ಸಂಬಂಧಿಸಿದ ಪೆನ್‌ಡ್ರೈವ್ ನನ್ನ ಹತ್ತಿರ ಇದೆ. ಆದರೆ, ಯಾರಾದರೂ ಸವಾಲು ಹಾಕಿದರೆ ಹಾಗೇ ತೋರಿಸುವಂತೆ ಹಠ ಹಿಡಿದರೆ ಸಂದರ್ಭ ಬಂದಾಗ ಪೆನ್​ಡ್ರೈವ್​ ತೋರಿಸುವೆ. ಅದನ್ನ ತೋರಿಸಿದ ಮೇಲೆ ಯಾರದ್ದು ಅಂತಾ ಗೊತ್ತಾಗುತ್ತೆ ಎಂದು ಹೇಳಿದರು. ಇದರೊಂದಿಗೆ ಬಿಜೆಪಿಯಲ್ಲಿದ್ದಾಗ ತಮಗೆ ಯಾರೆಲ್ಲಾ ಏನೆಲ್ಲ ಮಾಡಿದ್ದಾರೆ ಅದೆಲ್ಲ ಪೆನ್​ಡ್ರೈವ್​ನಲ್ಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.

ಬಿಜೆಪಿ ಹಾಗೂ ಜೆಡಿಎಸ್​ನವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಬೇನಾಮಿಗಳನ್ನು ಬೇನಾಮಿ ಎನ್ನದೇ ಇನ್ನು ಏನನ್ನಬೇಕು? ಕುಮಾರಸ್ವಾಮಿ ಪೆನ್ ಡ್ರೈವ್ ಬಿಟ್ಟ ಮರು ಕ್ಷಣವೇ ನಾನು ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಅವರು ಬುಟ್ಟಿಯಲ್ಲಿ ಹಾವಿದೆ ಹಾವಿದೆ ಅಂತಿದ್ದಾರೆ. ಹಾಗಾದರೆ ನಮ್ಮ ಬುಟ್ಟಿಯಲ್ಲೂ ಹಾವಿದೆ. ಅವರ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಹೇಳಿದರು.

ನನಗೆ ಬಿಜೆಪಿ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್​ಗೆ ಸೇರಿದ್ದೇನೆ. ನನಗೆ ಬಿಜೆಪಿ ಮಾಡಿದ ಅವಮಾನ ರೀತಿ ಆಗಬಾರದು ಗೌರವದಿಂದ ನಡೆದುಕೊಂಡು ಹೋಗಬೇಕು ಎಂದು ಕಾಂಗ್ರೆಸ್‌ಗೆ ಬಂದಿದ್ದೇನೆ. ನನ್ನ ಕ್ಷೇತ್ರಕ್ಕೆ ನೀರಾವರಿ ಯೋಜನೆ ನೀಡಬೇಕು ಎಂದಿದ್ದೆ. ಕ್ಷೇತ್ರದ ಜನತೆ ಬಹಳ ದೊಡ್ಡ ಋಣ ನನ್ನ ಮೇಲಿದೆ. ಕಾಗವಾಡ ಶಾಸಕ ರಾಜು ಕಾಗೆ, ನಾನು ಸಿಎಂ ಹಾಗೂ ಡಿಸಿಎಂ ಮುಂದೆ ಮಹತ್ವದ ಬೇಡಿಕೆ ಮಂಡಿಸುತ್ತೇವೆ, ಕಾಗವಾಡ ಶಾಸಕ ರಾಜು ಕಾಗೆ, ನಾನು ಮಹತ್ವದ ಬೇಡಿಕೆ ಮಂಡಿಸುತ್ತೇವೆ. ರಾಜು ಕಾಗೆ, ನಾನು ಜೋಡೆತ್ತಾಗಿ ಕಾರ್ಯ ಮಾಡುತ್ತೇವೆ ಎಂದರು.

lokesh

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

7 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

7 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

7 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

7 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

8 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

8 hours ago