ಬೆಳಗಾವಿ : ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸಿಡಿಸಿದ್ದ ಪೆನ್ಡ್ರೈವ್ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಅವರ ಪೆನ್ ಡ್ರೈವ್ನಲ್ಲಿ ಏನಿರಬಹುದು ಎನ್ನುವ ಕುತೂಹಲ ಜನರಲ್ಲಿ ಇದ್ದರೆ, ಆಡಳಿತರೂಢ ಸರ್ಕಾರಕ್ಕೆ ಆತಂಕಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಹ ಪೆನ್ಡ್ರೈವ್ ಬಾಂಬ್ ಸಿಡಿಸಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ನನ್ನ ಬಳಿ ಪೆನ್ಡ್ರೈವ್ ಇರುವುದು ಸತ್ಯ. ಯಾರು ಏನೇನು ಕುತಂತ್ರ ಮಾಡುತ್ತಿದ್ದರು ಎಂಬ ಕುರಿತ ಪೆನ್ಡ್ರೈವ್ ನನ್ನ ಬಳಿ ಇದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದ್ದಾರೆ.
ಯಾರ್ಯಾರು ಪಕ್ಷದಲ್ಲಿ ಕಾಲು ಎಳೆಯುವ ಕೆಲಸ ಮಾಡುತ್ತಿದ್ದರು. ಏನೇನು ಇತ್ತು ಎನ್ನುವುದಕ್ಕೆ ಸಂಬಂಧಿಸಿದ ಪೆನ್ಡ್ರೈವ್ ನನ್ನ ಹತ್ತಿರ ಇದೆ. ಆದರೆ, ಯಾರಾದರೂ ಸವಾಲು ಹಾಕಿದರೆ ಹಾಗೇ ತೋರಿಸುವಂತೆ ಹಠ ಹಿಡಿದರೆ ಸಂದರ್ಭ ಬಂದಾಗ ಪೆನ್ಡ್ರೈವ್ ತೋರಿಸುವೆ. ಅದನ್ನ ತೋರಿಸಿದ ಮೇಲೆ ಯಾರದ್ದು ಅಂತಾ ಗೊತ್ತಾಗುತ್ತೆ ಎಂದು ಹೇಳಿದರು. ಇದರೊಂದಿಗೆ ಬಿಜೆಪಿಯಲ್ಲಿದ್ದಾಗ ತಮಗೆ ಯಾರೆಲ್ಲಾ ಏನೆಲ್ಲ ಮಾಡಿದ್ದಾರೆ ಅದೆಲ್ಲ ಪೆನ್ಡ್ರೈವ್ನಲ್ಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ನವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಬೇನಾಮಿಗಳನ್ನು ಬೇನಾಮಿ ಎನ್ನದೇ ಇನ್ನು ಏನನ್ನಬೇಕು? ಕುಮಾರಸ್ವಾಮಿ ಪೆನ್ ಡ್ರೈವ್ ಬಿಟ್ಟ ಮರು ಕ್ಷಣವೇ ನಾನು ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಅವರು ಬುಟ್ಟಿಯಲ್ಲಿ ಹಾವಿದೆ ಹಾವಿದೆ ಅಂತಿದ್ದಾರೆ. ಹಾಗಾದರೆ ನಮ್ಮ ಬುಟ್ಟಿಯಲ್ಲೂ ಹಾವಿದೆ. ಅವರ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಹೇಳಿದರು.
ನನಗೆ ಬಿಜೆಪಿ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ಗೆ ಸೇರಿದ್ದೇನೆ. ನನಗೆ ಬಿಜೆಪಿ ಮಾಡಿದ ಅವಮಾನ ರೀತಿ ಆಗಬಾರದು ಗೌರವದಿಂದ ನಡೆದುಕೊಂಡು ಹೋಗಬೇಕು ಎಂದು ಕಾಂಗ್ರೆಸ್ಗೆ ಬಂದಿದ್ದೇನೆ. ನನ್ನ ಕ್ಷೇತ್ರಕ್ಕೆ ನೀರಾವರಿ ಯೋಜನೆ ನೀಡಬೇಕು ಎಂದಿದ್ದೆ. ಕ್ಷೇತ್ರದ ಜನತೆ ಬಹಳ ದೊಡ್ಡ ಋಣ ನನ್ನ ಮೇಲಿದೆ. ಕಾಗವಾಡ ಶಾಸಕ ರಾಜು ಕಾಗೆ, ನಾನು ಸಿಎಂ ಹಾಗೂ ಡಿಸಿಎಂ ಮುಂದೆ ಮಹತ್ವದ ಬೇಡಿಕೆ ಮಂಡಿಸುತ್ತೇವೆ, ಕಾಗವಾಡ ಶಾಸಕ ರಾಜು ಕಾಗೆ, ನಾನು ಮಹತ್ವದ ಬೇಡಿಕೆ ಮಂಡಿಸುತ್ತೇವೆ. ರಾಜು ಕಾಗೆ, ನಾನು ಜೋಡೆತ್ತಾಗಿ ಕಾರ್ಯ ಮಾಡುತ್ತೇವೆ ಎಂದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…