ಬೆಳಗಾವಿ : ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸಿಡಿಸಿದ್ದ ಪೆನ್ಡ್ರೈವ್ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಕುಮಾರಸ್ವಾಮಿ ಅವರ ಪೆನ್ ಡ್ರೈವ್ನಲ್ಲಿ ಏನಿರಬಹುದು ಎನ್ನುವ ಕುತೂಹಲ ಜನರಲ್ಲಿ ಇದ್ದರೆ, ಆಡಳಿತರೂಢ ಸರ್ಕಾರಕ್ಕೆ ಆತಂಕಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಹ ಪೆನ್ಡ್ರೈವ್ ಬಾಂಬ್ ಸಿಡಿಸಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ನನ್ನ ಬಳಿ ಪೆನ್ಡ್ರೈವ್ ಇರುವುದು ಸತ್ಯ. ಯಾರು ಏನೇನು ಕುತಂತ್ರ ಮಾಡುತ್ತಿದ್ದರು ಎಂಬ ಕುರಿತ ಪೆನ್ಡ್ರೈವ್ ನನ್ನ ಬಳಿ ಇದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದ್ದಾರೆ.
ಯಾರ್ಯಾರು ಪಕ್ಷದಲ್ಲಿ ಕಾಲು ಎಳೆಯುವ ಕೆಲಸ ಮಾಡುತ್ತಿದ್ದರು. ಏನೇನು ಇತ್ತು ಎನ್ನುವುದಕ್ಕೆ ಸಂಬಂಧಿಸಿದ ಪೆನ್ಡ್ರೈವ್ ನನ್ನ ಹತ್ತಿರ ಇದೆ. ಆದರೆ, ಯಾರಾದರೂ ಸವಾಲು ಹಾಕಿದರೆ ಹಾಗೇ ತೋರಿಸುವಂತೆ ಹಠ ಹಿಡಿದರೆ ಸಂದರ್ಭ ಬಂದಾಗ ಪೆನ್ಡ್ರೈವ್ ತೋರಿಸುವೆ. ಅದನ್ನ ತೋರಿಸಿದ ಮೇಲೆ ಯಾರದ್ದು ಅಂತಾ ಗೊತ್ತಾಗುತ್ತೆ ಎಂದು ಹೇಳಿದರು. ಇದರೊಂದಿಗೆ ಬಿಜೆಪಿಯಲ್ಲಿದ್ದಾಗ ತಮಗೆ ಯಾರೆಲ್ಲಾ ಏನೆಲ್ಲ ಮಾಡಿದ್ದಾರೆ ಅದೆಲ್ಲ ಪೆನ್ಡ್ರೈವ್ನಲ್ಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ನವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಬೇನಾಮಿಗಳನ್ನು ಬೇನಾಮಿ ಎನ್ನದೇ ಇನ್ನು ಏನನ್ನಬೇಕು? ಕುಮಾರಸ್ವಾಮಿ ಪೆನ್ ಡ್ರೈವ್ ಬಿಟ್ಟ ಮರು ಕ್ಷಣವೇ ನಾನು ಪೆನ್ ಡ್ರೈವ್ ಬಿಡುಗಡೆ ಮಾಡುತ್ತೇನೆ. ಅವರು ಬುಟ್ಟಿಯಲ್ಲಿ ಹಾವಿದೆ ಹಾವಿದೆ ಅಂತಿದ್ದಾರೆ. ಹಾಗಾದರೆ ನಮ್ಮ ಬುಟ್ಟಿಯಲ್ಲೂ ಹಾವಿದೆ. ಅವರ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಹೇಳಿದರು.
ನನಗೆ ಬಿಜೆಪಿ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ಗೆ ಸೇರಿದ್ದೇನೆ. ನನಗೆ ಬಿಜೆಪಿ ಮಾಡಿದ ಅವಮಾನ ರೀತಿ ಆಗಬಾರದು ಗೌರವದಿಂದ ನಡೆದುಕೊಂಡು ಹೋಗಬೇಕು ಎಂದು ಕಾಂಗ್ರೆಸ್ಗೆ ಬಂದಿದ್ದೇನೆ. ನನ್ನ ಕ್ಷೇತ್ರಕ್ಕೆ ನೀರಾವರಿ ಯೋಜನೆ ನೀಡಬೇಕು ಎಂದಿದ್ದೆ. ಕ್ಷೇತ್ರದ ಜನತೆ ಬಹಳ ದೊಡ್ಡ ಋಣ ನನ್ನ ಮೇಲಿದೆ. ಕಾಗವಾಡ ಶಾಸಕ ರಾಜು ಕಾಗೆ, ನಾನು ಸಿಎಂ ಹಾಗೂ ಡಿಸಿಎಂ ಮುಂದೆ ಮಹತ್ವದ ಬೇಡಿಕೆ ಮಂಡಿಸುತ್ತೇವೆ, ಕಾಗವಾಡ ಶಾಸಕ ರಾಜು ಕಾಗೆ, ನಾನು ಮಹತ್ವದ ಬೇಡಿಕೆ ಮಂಡಿಸುತ್ತೇವೆ. ರಾಜು ಕಾಗೆ, ನಾನು ಜೋಡೆತ್ತಾಗಿ ಕಾರ್ಯ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…