BREAKING NEWS

ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಮುನ್ನ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಹೈಗ್ರೌಂಡ್ಸ್‌ ಬಳಿಯಿರುವ ಕೆಜಿಎಫ್‌ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವಖಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಜಿಎಫ್‌ ಬಾಬುಗೆ ಸೇರಿದ ರಕ್ಸಾನಾ ಪ್ಯಾಲೇಸ್‌ ಹಾಗೂ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬುಧವಾರ ಬೆಳಗ್ಗೆಯಿಂದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಸೇರಿ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜಧಾನಿ ಬೆಂಗಳೂರಿನ 50 ಕಡೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ.
ಈ ಹಿಂದೆಯೂ ಕೂಡ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯ ತೆರಿಗೆ ವಂಚನೆಯಡಿ, ಕಳೆದ ವರ್ಷ ಮೇ 28ರಂದು ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು. ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದರು. ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕೆಜಿಎಫ್‌ ಬಾಬು 1741 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದರು.

ಬಡವರಾಗಿಯೇ ಇದ್ದುಬಿಡಿ ಎಂದಿದ್ದ ಕೆಜಿಎಫ್‌ ಬಾಬು : ಈ ಹಿಂದೆ ಐಟಿ ಮತ್ತು ಇಡಿ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ್ದ ಕೆಜಿಎಫ್‌ ಬಾಬು ಬಡವರು ಬಡವರಾಗಿಯೇ ಇದ್ದುಬಿಡಿ. ಶ್ರೀಮಂತರಾದರೆ ಐಟಿ, ಇಡಿ, ಸಿಬಿಐ ದಾಳಿ ಭಯ ಇರುತ್ತದೆ ಎಂದು ಹೇಳಿದ್ದರು. ಬಡವನೊಬ್ಬ ಶ್ರಮವಹಿಸಿ ದುಡಿದು ಕಾನೂನು ಬದ್ಧವಾಗಿಯೇ ಶ್ರೀಮಂತನಾದರೂ ದೇಶದ ತನಿಖಾ ಸಂಸ್ಥೆಗಳು ವಿಚಾರಣೆ ಹೆಸರಿನಲ್ಲಿ ಮಾನಸಿಕ ಕಿರುಕುಳ ನೀಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

1,621 ಕೋಟಿ ರೂ. ಆಸ್ತಿ ಒಡೆಯ ಕೆಜಿಎಫ್‌ ಬಾಬು : ಕೆಜಿಎಫ್‌ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಭಾರೀ ತಯಾರಿ ನಡೆಸಿದ್ದರು. ಆದರೆ, ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಅವರ ಪತ್ನಿ ಶಾಝಿಯಾ ತರನ್ನುಮ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಈ ವೇಳೆ ಅವರು ತಮ್ಮ ಹಾಗೂ ತಮ್ಮ ಪತಿ ಕೆಜಿಎಫ್‌ ಬಾಬು ಅವರ ಆಸ್ತಿ ವಿವರ ಘೋಷಿಸಿದ್ದು, ಅವರ ಬಳಿ 1,621 ಕೋಟಿ ರೂ. ಆಸ್ತಿ ಇದೆ ಎಂಬುದು ಬಹಿರಂಗವಾಗಿದೆ. ಕೆಜಿಎಫ್‌ ಬಾಬು ಹೆಸರಿನಲ್ಲಿ 83.56 ಕೋಟಿ ರೂ.ಗಳ ಚರಾಸ್ತಿ ಇದ್ದು, 1,538.15 ಕೋಟಿ ರೂ. ಬೆಲೆ ಬಾಳುವ ಸ್ಥಿರಾಸ್ತಿಗಳಿವೆ ಎಂದು ಅಫಿಡವಿಟ್‌ನಲ್ಲಿ ಘೋಷಿಸಲಾಗಿದೆ.

lokesh

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

1 min ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

19 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

31 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago