BREAKING NEWS

ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಮುನ್ನ ಬೆಂಗಳೂರಿನ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಹೈಗ್ರೌಂಡ್ಸ್‌ ಬಳಿಯಿರುವ ಕೆಜಿಎಫ್‌ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವಖಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಜಿಎಫ್‌ ಬಾಬುಗೆ ಸೇರಿದ ರಕ್ಸಾನಾ ಪ್ಯಾಲೇಸ್‌ ಹಾಗೂ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬುಧವಾರ ಬೆಳಗ್ಗೆಯಿಂದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಸೇರಿ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜಧಾನಿ ಬೆಂಗಳೂರಿನ 50 ಕಡೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ.
ಈ ಹಿಂದೆಯೂ ಕೂಡ ಕೆಜಿಎಫ್‌ ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದಾಯ ತೆರಿಗೆ ವಂಚನೆಯಡಿ, ಕಳೆದ ವರ್ಷ ಮೇ 28ರಂದು ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು. ಕೆಜಿಎಫ್ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದರು. ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕೆಜಿಎಫ್‌ ಬಾಬು 1741 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದರು.

ಬಡವರಾಗಿಯೇ ಇದ್ದುಬಿಡಿ ಎಂದಿದ್ದ ಕೆಜಿಎಫ್‌ ಬಾಬು : ಈ ಹಿಂದೆ ಐಟಿ ಮತ್ತು ಇಡಿ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ್ದ ಕೆಜಿಎಫ್‌ ಬಾಬು ಬಡವರು ಬಡವರಾಗಿಯೇ ಇದ್ದುಬಿಡಿ. ಶ್ರೀಮಂತರಾದರೆ ಐಟಿ, ಇಡಿ, ಸಿಬಿಐ ದಾಳಿ ಭಯ ಇರುತ್ತದೆ ಎಂದು ಹೇಳಿದ್ದರು. ಬಡವನೊಬ್ಬ ಶ್ರಮವಹಿಸಿ ದುಡಿದು ಕಾನೂನು ಬದ್ಧವಾಗಿಯೇ ಶ್ರೀಮಂತನಾದರೂ ದೇಶದ ತನಿಖಾ ಸಂಸ್ಥೆಗಳು ವಿಚಾರಣೆ ಹೆಸರಿನಲ್ಲಿ ಮಾನಸಿಕ ಕಿರುಕುಳ ನೀಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

1,621 ಕೋಟಿ ರೂ. ಆಸ್ತಿ ಒಡೆಯ ಕೆಜಿಎಫ್‌ ಬಾಬು : ಕೆಜಿಎಫ್‌ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಭಾರೀ ತಯಾರಿ ನಡೆಸಿದ್ದರು. ಆದರೆ, ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಅವರ ಪತ್ನಿ ಶಾಝಿಯಾ ತರನ್ನುಮ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಈ ವೇಳೆ ಅವರು ತಮ್ಮ ಹಾಗೂ ತಮ್ಮ ಪತಿ ಕೆಜಿಎಫ್‌ ಬಾಬು ಅವರ ಆಸ್ತಿ ವಿವರ ಘೋಷಿಸಿದ್ದು, ಅವರ ಬಳಿ 1,621 ಕೋಟಿ ರೂ. ಆಸ್ತಿ ಇದೆ ಎಂಬುದು ಬಹಿರಂಗವಾಗಿದೆ. ಕೆಜಿಎಫ್‌ ಬಾಬು ಹೆಸರಿನಲ್ಲಿ 83.56 ಕೋಟಿ ರೂ.ಗಳ ಚರಾಸ್ತಿ ಇದ್ದು, 1,538.15 ಕೋಟಿ ರೂ. ಬೆಲೆ ಬಾಳುವ ಸ್ಥಿರಾಸ್ತಿಗಳಿವೆ ಎಂದು ಅಫಿಡವಿಟ್‌ನಲ್ಲಿ ಘೋಷಿಸಲಾಗಿದೆ.

lokesh

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago